ಮಂಗಳೂರು: ತಮ್ಮ ಅಪ್ರಾಪ್ತ ಮಗ (Son Suicide) ಆತ್ಮಹತ್ಯೆ ಮಾಡಿಕೊಂಡಿದ್ದ ಬೇಸರದಲ್ಲಿ ತಂದೆಯೂ (Father Suicide) ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ. ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಸಾವನ್ನಪ್ಪಿದ ದುರ್ದೈವಿ ಎನ್ನಲಾಗಿದೆ. ಮಗ ಆತ್ಮಹತ್ಯೆ ಮಾಡಿಕೊಂಡ ನೋವಿನಲ್ಲಿದ್ದ ತಂದೆ 13 ದಿನಗಳ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜನವರಿ 4 ರಂದು ಪುತ್ರ ಯಕ್ಷಿತ್ (14) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಹೀಗಾಗಿ ಮಗನ ಉತ್ತರ ಕ್ರಿಯೆ ಜನವರಿ 14 ರಂದು ನಡೆದಿತ್ತು. ನಂತರ ಮನನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಕ್ಷಿತ್, ಉಜಿರೆ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ಓದುತ್ತಿದ್ದ. ಆದರೆ, ಇತ್ತೀಚೆಗೆ ತನ್ನ ತಮ್ಮನೊಂದಿಗೆ ಗಟಾಲೆ ಮಾಡಿಕೊಂಡಿದ್ದ. ಈ ಗಲಾಟೆಯಲ್ಲಿ ಯಕ್ಷಿತ್ ಹೊಟ್ಟೆ ಮೇಲೆ ತಮ್ಮ ಕಚ್ಚಿ ಗಾಯ ಮಾಡಿದ್ದ. ಈ ವಿಚಾರದಲ್ಲಿ ನೊಂದು ತಮ್ಮನ ಎದುರೇ ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.








