ಚಂಡೀಗಢ: ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಎಂದು ಘೋಷಣೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಹರಿಯಾಣದ ರೇವಾರಿಯಲ್ಲಿ ಹಲವಾರು ಯೋಜನೆಗಳ ಉದ್ಘಾಟನೆ ಹಾಗೂ ಏಮ್ಸ್ ಸಂಸ್ಥೆಯ ಅಡಿಪಾಯ ಹಾಕಿದ ನಂತರ ಮಾತನಾಡಿದ ಅವರು, ನಾನು ಕೊಟ್ಟಿರುವ ಕೆಲವು ಭರವಸೆಗಳ್ನು ಈಡೇರಿಸಿದ್ದೇನೆ. ದೇಶವು ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಬಯಸಿತ್ತು. ಅದು ಈಡೇರಿದೆ ಎಂದರು.
ಸಂವಿಧಾನದ 370 ನೇ ವಿಧಿ ರದ್ದುಗೊಳಿಸುವಲ್ಲಿ ಕಾಂಗ್ರೆಸ್ ದಶಕಗಳಿಂದ ಅಡೆತಡೆಗಳನ್ನು ಸೃಷ್ಟಿಸಿದೆ.ದೇಶವು ಇಂದು ಜಗತ್ತಿನಲ್ಲಿಯೇ ಎತ್ತರದ ಸ್ಥಾನದಲ್ಲಿದೆ. ಭಾರತಕ್ಕೆ ಈಗ ಪ್ರತಿಯೊಂದು ಮೂಲೆಯಿಂದಲೂ ಗೌರವ ಸಿಗುತ್ತದೆ. ಕೇವಲ ಮೋದಿಯವರಿಗೆ ಮಾತ್ರವಲ್ಲ, ಪ್ರತಿಯೊಬ್ಬ ಭಾರತೀಯನಿಗೂ ಈ ಗೌರವ ಸಿಗುತ್ತದೆ ಎಂದು ಬಣ್ಣಿಸಿದ್ದಾರೆ. ಜನರ ಆಶೀರ್ವಾದದಿಂದಲೇ ಇದೆಲ್ಲ ಸಾಧ್ಯವಾಯಿತು ಎಂದಿದ್ದಾರೆ.