1.ಮೇಷ-ಪೂರ್ವ-ಮಂಗಳ.
2.ವೃಷಭ-ಪೂರ್ವ-ಶುಕ್ರ.
3.ಮಿಥುನ-ಆಗ್ನೇಯ-ಬುಧ.
4.ಕರ್ಕಾಟಕ-ದಕ್ಷಿಣ-ಚಂದ್ರ .
5.ಸಿಂಹ-ದಕ್ಷಿಣ-ಸೂರ್ಯ.
6.ಕನ್ಯಾ-ನ್ಯೆರುತ್ಯ-ಬುಧ.
7.ತುಲಾ-ಪಶ್ಚಿಮ-ಶುಕ್ರ.
8.ವೃಶ್ಚಿಕ-ಪಶ್ಚಿಮ-ಮಂಗಳ.
9.ಧನಸ್ಸು-ವಾಯುವ್ಯ-ಗುರು.
10.ಮಕರ-ಉತ್ತರ-ಶನಿ.
11.ಕುಂಭ-ಉತ್ತರ-ಶನಿ.
12.ಮೀನ-ಈಶಾನ್ಯ-ಗುರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ನವಗ್ರಹ ಸಮಿಧೆಗಳು
ಸೂರ್ಯನಿಗೆ ಅರ್ಕ (ಎಕ್ಕ)
ಚಂದ್ರನಿಗೆ ಪಲಾಶ (ಮುತ್ತುಗ)
*ಕುಜನಿಗೆ ಖದಿರ,
*ಬುಧನಿಗೆ ಉತ್ತರಣೆ
*ಗುರುವಿಗೆ ಅಶ್ವತ್ಥ,
*ಶುಕ್ರನಿಗೆ ಔದುಂಬರ (ಅತ್ತಿ)
*ಶನಿಗೆ ಶಮೀ,
*ರಾಹುವಿಗೆ ದೂರ್ವ
ಕೇತುವಿಗೆ ಕುಶ (ಗರಿಕೆ).
ನಿರ್ದಿಷ್ಟ ಗ್ರಹವೊಂದರಿಂದ ಸೂಚಿತವಾದ ದೋಷದ ನಿವೃತ್ತಿಗಾಗಿ ಪ್ರತ್ಯೇಕ ಪ್ರತ್ಯೇಕವಾಗಿ ಗ್ರಹಗಳನ್ನು ಸ್ತುತಿಸುವ ಸ್ತೋತ್ರಗಳೂ ಇವೆ. ವೇದ ಮಂತ್ರದ ಬಗ್ಗೆ ತಿಳಿಯದವರೂ ಈ ಗ್ರಹ ಸ್ತೋತ್ರವನ್ನು ನಿತ್ಯವೂ ಪಠಿಸುವುದರ ಮೂಲಕ ಗ್ರಹ ದೋಷವನ್ನು ಪರಿಹರಿಸಿ ಕೊಳ್ಳ ಬಹುದು. ಅಂತಹ ಸುಲಭವಾಗಿ ಪಠಿಸ ಬಹುದಾದ ಚಿಕ್ಕ ಶ್ಲೋಕಗಳನ್ನು ಇಲ್ಲಿ ಕೊಟ್ಟಿದೆ:
*ರವಿ :
ಜಪಾಕುಸುಮಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್ |
ಧ್ವಾಂತಾರಿಂ ಸರ್ವಪಾಪಘ್ನಂ ಪ್ರಣತೋಸ್ಮಿ ದಿವಾಕರಮ್ ||
ಅರ್ಥ: “ಕೆಂಪು ದಾಸವಾಳ ಪುಷ್ಫದ ಕಾಂತಿ, ಕಶ್ಯಪನ ಮಗ, ಮಹಾತೇಜಸ್ವಿ, ಕತ್ತಲ ಕಡುವೈರಿ, ಸರ್ವಪಾಪ ನಾಶಕ, ಇಂತಹಾ ದಿವಾಕರನನ್ನು ನಮಿಪೆ”
*ಚಂದ್ರ :
ದಧಿಶಂಖತುಷಾರಾಭಂ ಕ್ಷೀರೋದಾರ್ಣವ ಸಂಭವಮ್ |
ನಮಾಮಿ ಶಶಿನಂ ಭಕ್ತ್ಯಾ ಶಂಭೋರ್ಮುಕುಟಭೂಷಣಮ್ ||
ಅರ್ಥ: ಮೊಸರು, ಶಂಖ, ಹಿಮಗಳಂತೆ ಶ್ವೇತಕಾಂತಿ, ಕ್ಷೀರಸಾಗರದಲ್ಲಿ ಉತ್ಪತ್ತಿ, ಶಿವನ ತಲೆಯ ಅಲಂಕಾರ. ಅಂತಹ ಶಶಾಂಕನಿಗೆ ಭಕ್ತಿಯಿಂದ ಬಾಗುವೆ.
*ಅಂಗಾರಕ :
ಧರಣೀ ಗರ್ಭಸಂಭೂತಂ ವಿದ್ಯುತ್ಕಾಂಚನಸನ್ನಿಭಮ್ |
ಕುಮಾರಂ ಶಕ್ತಿಹಸ್ತಂ ಚ ಮಂಗಲಂ ಪ್ರಣಮಾಮ್ಯಹಮ್ ||
ಅರ್ಥ: ಭೂದೇವಿಯ ಗರ್ಭದಲ್ಲಿ ಜನಿಸಿದ, ಮಿಂಚಿನ ಮತ್ತು ಚಿನ್ನದ ಕಾಂತಿಯಂತೆ ಪಾಟಲ ಕಾಂತಿಯುಳ್ಳ ಹದಿನಾರು ವರುಷದ ಕುಮಾರನಾದ ಶಕ್ತ್ಯಾಯುಧ ಧರಿಯಾದ ಮಂಗಲನಿಗೆ ನನ್ನ ನಮನ.
*ಬುಧ :
ಪ್ರಿಯಂಗು ಕಲಿಕಾಭಾಸಂ ರೂಪೇಣಾಪ್ರತಿಮಂ ಬುಧಮ್|
ಸೌಮ್ಯಂ ಸೌಮ್ಯಗುಣೋಪೇತಂ ನಮಾಮಿ ಶಶಿನಂದನಮ್ ||
ಅರ್ಥ: ನವಣೆಯ ತೆನೆಯಂತೆ ಹಸಿರು ಕಾಂತಿಯುಳ್ಳವ. ರೂಪದಲ್ಲಿ ಸಾಟಿಯಿಲ್ಲ, ಸೋಮನ (ಚಂದ್ರನ) ಮಗ. ಸೌಮ್ಯಸ್ವಭಾವ. ಅಪ್ಪನಾದ ಚಂದ್ರನ ಗುಣಗಳುಳ್ಳವ. ಚಂದ್ರನಿಗೆ ಮಿತ್ರಗ್ರಹವೆನಿಸಿ ಆನಂದಪ್ರದನಾದ ಬುಧನಿಗೆ ನನ್ನ ಪ್ರಣಾಮಗಳು.
*ಗುರು :
ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನಸನ್ನಿಭಮ್ |
ವಂದ್ಯಂ ಚ ತ್ರಿಷು ಲೋಕೇಷು ಪ್ರಣಮಾಮಿ ಬೃಹಸ್ಪತಿಮ್ ||
ಅರ್ಥ: ದೇವತೆಗಳಿಗೂ, ಋಷಿಗಳಿಗೂ ಗುರುವಾದ ಬಂಗಾರದ ಕಾಂತಿಯುಳ್ಳ, ತ್ರಿಲೋಕದಲ್ಲೂ ವಂದ್ಯರಾದ ಬೃಹಸ್ಪತ್ಯಾಚಾರ್ಯರನ್ನು ನಮಿಪೆ.
*ಶುಕ್ರ :
ಹಿಮಕುಂದಮೃಣಾಲಾಭಂ ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್ ||
ಅರ್ಥ: ಹಿಮ, ದುಂಡು ಮಲ್ಲಿಗೆ, ತಾವರೆ ದಂಟುಗಳಂತೆ ಬಿಳಿಯ ಕಾಂತಿಯುಳ್ಳ, ದೈತ್ಯರ ಪರಮ ಗುರುವಾದ, ಸರ್ವ ಶಾಸ್ತ್ರಗಳನ್ನು ಪ್ರವಚನ ಮಾಡ ಬಲ್ಲ ಭೃಗು ಗೋತ್ರೋತ್ಪನ್ನರಾದ ಶುಕ್ರಾಚಾರ್ಯರನ್ನು ವಂದಿಪೆ.
*ಶನಿ :
ನೀಲಾಂಜನಗಿರಿಪ್ರಖ್ಯಂ ರವಿಸೂನುಂ ಯಮಾಗ್ರಜಮ್ |
ಛಾಯಾಮಾರ್ತಾಂಡಸಂಭೂತಂ ಪ್ರಣಮಾಮಿ ಶನೈಶ್ಚರಮ್ ||
ಅರ್ಥ: ಇಂದ್ರನೀಲ ಪರ್ವತದಂತೆ ನೀಲಕಾಂತಿಯುಳ್ಳ ರವಿ ಕುವರ, ಮಹಾ ತೇಜಸ್ವಿ, ಛಾಯಾ ದೇವಿಯಲ್ಲಿ ಸೂರ್ಯನಿಗೆ ಜನಿಸಿದ, ಶನಿಶ್ಚರನಿಗೆ ಶಿರ ಬಾಗುವೆ.
*ರಾಹು :
ಯೋ ವಿಷ್ಣುನೈವಾಮೃತಂ ಪೀಯಮಾನಂ ಶಿರಚ್ಛಿತ್ವಾ ಗ್ರಹಭಾವೇನಯುಕ್ತಃ |
ಯಶ್ಚಂದ್ರಸೂರ್ಯೌ ಗ್ರಸತೇ ಪರ್ವಕಾಲೇ ರಾಹುಂ ಸದಾ ಶರಣಮಹಂ ಪ್ರಪದ್ಯೇ ||
ಅರ್ಥ: ಅಮೃತವನ್ನು ಕುಡಿಯುತ್ತಿರುವ ತಲೆಯನ್ನು ವಿಷ್ಣು ಕತ್ತರಿಸಿದ. ದೇವತಾ ಸಾನಿಧ್ಯದಿಂದ ಅದೇ ತಲೆ ಗ್ರಹವೆನಿಸಿತು. (ದೈತ್ಯ ಪ್ರವೃತ್ತಿಯಿಂದ) ಈ ರಾಹು ಹುಣ್ಣಿಮೆ ಅಮಾವಾಸ್ಯೆಗಳಂದು ಚಂದ್ರ ಸೂರ್ಯರನ್ನು ನುಂಗುತ್ತಾನೆ. ಇಂತಹಾ ರಾಹುವನ್ನು ಸರ್ವದಾ ಮೊರೆ ಹೊಂದುತ್ತೇನೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
*ಕೇತು :
ಯೇಬ್ರಹ್ಮಪುತ್ರಾಃ ಬ್ರಹ್ಮಸಮಾನ ವಕ್ತ್ರಾಃ ಬ್ರಹ್ಮೋದೃವಾಃ ಬ್ರಹ್ಮವಿಧಃ ಕುಮಾರಾಃ |
ಬ್ರಹ್ಮೋತ್ತಮಾ ವರದಾ ಜಾಮದಗ್ನ್ಯಾಃ ಕೇತೂನ್ ಸದಾ ಶರಣಮಹಂ ಪ್ರಪದ್ಯೇ ||
ಅರ್ಥ: ಇವರು ಬ್ರಹ್ಮಪುತ್ರರು ಚತುರ್ಮುಖ ಬ್ರಹ್ಮನ ಮುಖದಂತೆ ಮುಖವುಳ್ಳವರು. ಬ್ರಾಹ್ಮಣ ವಂಶ ಸಂಜಾತರು. ಬ್ರಹ್ಮಜ್ಞಾನಿಗಳು. ಹದಿಹರೆಯದ ಕುಮಾರರು. ಬ್ರಾಹ್ಮಣ ಶ್ರೇಷ್ಠರು. ವರಪ್ರದರು. ಜಮದಗ್ನಿ ಗೋತ್ರೋತ್ಪನ್ನರು. ಇಂತಹ ಕೇತುಗಳನ್ನು ನಾನು ಸದಾ ಶರಣು ಹೋಗುತ್ತೇನೆ.







