ಬೆಂಗಳೂರು: ಪ್ರದೇಶ ಕುರುಬರ ಸಂಘಕ್ಕೆ ಇಂದು ನಡೆದ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಣ ಭರ್ಜರಿ ಗೆಲುವು ದಾಖಲಿದೆ. ಆದರೆ ಸಚಿವ ಕೆ.ಎಸ್. ಈಶ್ವರಪ್ಪ ಬಣ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗದೆ ಹೀನಾಯ ಸೋಲು ಕಾಣುವ ಮೂಲಕ ತೀವ್ರ ಮುಖಭಂಗ ಅನುಭವಿದೆ.
ಕುರುಬರ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ನಾನಾ ಹುದ್ದೆಗೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಸಿದ್ದರಾಮಯ್ಯ ಬೆಂಬಲಿತ ಅಭ್ಯರ್ಥಿ ಬಳ್ಳಾರಿ ಮೂಲದ ಕೃಷ್ಣ 83 ಮತಗಳೊಂದಿಗೆ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಮೇಯರ್ ವೆಂಕಟೇಶ ಮೂರ್ತಿ ಆಯ್ಕೆಯಾಗಿದ್ದರೆ, ಕಾರ್ಯಾಧ್ಯಕ್ಷರಾಗಿ ಮೈಸೂರು ಸುಬ್ಬಣ್ಣ, ಖಜಾಂಚಿಯಾಗಿ ದೇವರಾಜು, ಹಿರಿಯ ಉಪಾಧ್ಯಕ್ಷರಾಗಿ ಈರಣ್ಣ ಝಳಕಿ ಗೆದ್ದಿದ್ದಾರೆ.
ಉಪಾಧ್ಯಕರಾಗಿ ಕೃಷ್ಣ ಕುಮಾರ್, ಪುಟ್ಟಬಸವಯ್ಯ, ಮಿರ್ಜಾಪುರ ಮಹಾದೇವಪ್ಪ, ಎಂ.ಸಿ.ರಾಜಣ್ಣ, (ವೆಂಕಟರಮಣಪ್ಪ ಹಾಗೂ ಶಂಕರ ವಿಠೋಬ ಹೆಗಡೆ ಆಯ್ಕೆಯಾಗಿದ್ದಾರೆ
Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..!
ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್ ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....








