ತಮಿಳು ಖ್ಯಾತ ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ಸದ್ಯ ಈ ಕುರಿತು ಅಪ್ಡೇಟ್ ಬಂದಿದೆ.
ನಟರ ನರಗಳಲ್ಲಿ ಊತ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಅವರು ಮಿದುಳಿನ ಸರ್ಜರಿಗೆ ಒಳಗಾಗಲಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಅಜಿತ್ ಕುಮಾರ್ ವಕ್ತಾರರು ಸ್ಪಷ್ಟನೆ ನೀಡಿದ್ದಾರೆ. ಅಜಿತ್ ಕುಮಾರ್ ಅವರು ಚೇತರಿಕೆ ಕಾಣುತ್ತಿದ್ದು, ಸರ್ಜರಿ ವಿಚಾರ ಸುಳ್ಳು ಎಂದು ಅವರು ತಿಳಿಸಿದ್ದಾರೆ.
ಅಜಿತ್ ಕುಮಾರ್ ಮಿದುಳಿನಲ್ಲಿ ಗುಳ್ಳೆ ಉಂಟಾಗಿದೆ ಎಂದು ಹೇಳಲಾಗಿತ್ತು.
ಇದರಲ್ಲಿ ಹುರುಳಿಲ್ಲ ಎಂಬುದು ಅವರ ವಕ್ತಾರರ ಮಾತು. ‘ಅಜಿತ್ ಕುಮಾರ್ ಅವರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ‘ಅಜಿತ್ ಅವರು ಮಿಲನ್ನ ಭೇಟಿ ಮಾಡಬೇಕಿತ್ತು. ಆದರೆ, ಏಕಾಏಕಿ ಅವರು ತೀರಿಹೋದರು. ಆ ನಂತರ ಅಜಿತ್ ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ.
ಸದ್ಯ ಅಜಿತ್ ಕುಮಾರ್ ವಿದಾ ಮುಯರಾಚಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.