ಬಳ್ಳಾರಿ: ಪರೀಕ್ಷೆಗೆಂದು ಮನೆಯ ಅಂಗಳದಲ್ಲಿ ಓದುತ್ತಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಮ್ ಚವ್ಹಾಣನನ್ನು ಪೊಲೀಸರು ಬಂಧಿಸಿದ್ದಾರೆ. ಕಮಲಾಪುರ ಹೊನಬಟ್ಟಿ ತಾಂಡದಲ್ಲಿ ಬಾಲಕಿ ಮನೆಯ ಹೊರಗೆ ಕುಳಿತು ತಡರಾತ್ರಿವರೆಗೂ ಓದಿಕೊಳ್ಳುತ್ತಿದ್ದಳು. ಈ ವೇಳೆ ಬಂದ ಆರೋಪಿ ರಾಮ್, ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ರಕ್ಷಣೆಗಾಗಿ ಕಿರುಚಿಕೊಂಡಾಗ ನೆರೆಮನೆಯವರು ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಕಮಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...








