ನವದೆಹಲಿ: ಗುಜರಾತ್ ಜೈಂಟ್ಸ್ ವಿರುದ್ಧ ಯುಪಿ ವಾರಿಯರ್ಸ್ ಸೋತ ಹಿನ್ನೆಲೆಯಲ್ಲಿ ಪ್ಲೆಫ್ ಗೆ ಆರ್ ಸಿಬಿ ಬಹುತೇಕ ಪ್ರವೇಶ ಪಡೆದಿದ್ದು, ಯುಪಿ ಹೊರ ನಡೆದಿದೆ.
ದೀಪ್ತಿ ಶರ್ಮಾ ಸ್ಫೋಟಕ ಬ್ಯಾಟಿಂಗ್ ನಿಂದಾಗಿಯೂ ಗುಜರಾತ್ ಜೈಂಟ್ಸ್ ಯುಪಿ ವಾರಿಯರ್ಸ್ ವಿರುದ್ಧ ಗುಜರಾತ್ 8 ರನ್ ಗಳ ಜಯ ಸಾಧಿಸಿದೆ. ಈ ಮೂಲಕ ಯುಪಿ ವಾರಿಯರ್ಸ್ ತಂಡ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಯುಪಿ ವಾರಿಯರ್ಸ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿ ಸೋಲು ಕಂಡಿದೆ. ಈ ಮೂಲಕ ರೇಸ್ ನಿಂದ ಹೊರಗೆ ಬಿದ್ದಿದೆ.
ಆರಂಭದಲ್ಲಿ ನಾಲ್ಕು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ಗುಜರಾತ್ ನಂತರ ಮೂರು ಪಂದ್ಯಗಳಲ್ಲಿ ಸುಧಾರಿತ ಪ್ರದರ್ಶನ ನೀಡಿತ್ತು. 7 ಪಂದ್ಯಗಳಲ್ಲಿ 2 ರಲ್ಲಿ ಗೆಲುವು ಸಾಧಿಸಿರುವ ಗುಜರಾತ್ ಜೈಂಟ್ಸ್ ಮಾ.13 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊನೆಯ ಪಂದ್ಯವನ್ನಾಡಲಿದೆ. ಈ ಪಂದ್ಯದಲ್ಲಿ ಗೆದ್ದರೂ ಸೋತರೂ ಗುಜರಾತ್ ಮನೆಗೆ ಹೋಗಬೇಕಿದೆ. ಯುಪಿ ವಾರಿಯರ್ಸ್ ತಂಡವು ತನ್ನ ಲೀಗ್ ಸುತ್ತಿನ ಎಲ್ಲಾ ಪಂದ್ಯಗಳನ್ನಾಡಿದ್ದು, ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಹೀಗಾಗಿ 3ನೇ ಸ್ಥಾನದಲ್ಲಿರುವ ಆರ್ಸಿಬಿ ಮಾ.12 ರಂದು ನಡೆಯಲಿರುವ ಕೊನೆಯ ಲೀಗ್ ಪಂದ್ಯದಲ್ಲಿ ಗೆದ್ದರೂ ಸೋತರೂ ಪ್ಲೇ ಆಫ್ ಗೆ ಎಂಟ್ರಿ ಕೊಡಲಿದೆ.