ಚಿತ್ರನಟ ಹಾಗೂ ರಂಗಭೂಮಿ ಕಲಾವಿದ ಪ್ರಕಾಶ್ ಹೆಗ್ಗೋಡು(58) ಇಹಲೋಕ ತ್ಯಜಿಸಿದ್ದಾರೆ.
ನಟ ಪ್ರಕಾಶ್ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರಕಾಶ್ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಾವಿನ ಸುದ್ದಿ ಕೇಳಿ ಆಪ್ತರು, ಸಿನಿಮಾ ನಟ-ನಟಿಯರು, ಅಭಿಮಾನಿಗಳು ಕಣ್ಣೀರು ಸುರಿಸಿದ್ದಾರೆ.
ಪ್ರಕಾಶ್ ಹೆಗ್ಗೋಡು ಶಿವಮೊಗ್ಗ ಜಿಲ್ಲೆಯ, ಸಾಗರ ತಾಲೂಕಿನ ಪುರಪ್ಪೆಮನೆಯವರು ಎನ್ನಲಾಗಿದೆ. ಇಂದು ಅಂತಿಮ ದರ್ಶನ ಅವರ ಸ್ವಗೃಹವಾದ ಪುರಪ್ಪೆಮನೆಯಲ್ಲಿ ನಡೆಯಲಿದೆ. ಆಪ್ತರು, ಊರಿನ ಜನರಿಗೆ ಅಂತಿಮ ದರ್ಶನ ಪಡೆಯಬಹುದಾಗಿದೆ. ಪ್ರಕಾಶ್, ಸಂತ, ಭಾಗ್ಯದ ಬಳೆಗಾರ, ಕಲ್ಪನಾ 2, ವೀರು, ಕಲಾಸಿಪಾಳ್ಯ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.