ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಿನಲ್ಲಿ ಹತ್ತು ಸಾವಿರ ಹಾಸಿಗೆ ಸೌಲಭ್ಯಕ್ಕೆ ಕ್ರಮ : ಸಚಿವ ಸುಧಾಕರ್

admin by admin
June 27, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಸಮರೋಪಾದಿಯಲ್ಲಿ ಕಾರ್ಯ ನಿವ೯ಹಿಸಲು ಅಧಿಕಾರಿಗಳಿಗೆ ತಾಕೀತು
ಬೆಂಗಳೂರಿನಲ್ಲಿ ಹತ್ತು ಸಾವಿರ ಹಾಸಿಗೆ ಸೌಲಭ್ಯಕ್ಕೆ ಕ್ರಮ : ಸಚಿವ ಸುಧಾಕರ್
ಬೆಂಗಳೂರು : ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಮವಾರ ಸಂಜೆಯೊಳಗಾಗಿ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಕನಿಷ್ಟ ಹತ್ತು ಸಾವಿರ ಹಾಸಿಗೆಗಳ ವ್ಯವಸ್ಥೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.
ಬೆಂಗಳೂರು ನಗರದಾದ್ಯಂತ ಚಿಕಿತ್ಸೆಗೆ ಅಗತ್ಯವಿರುವ ಸಕಾ೯ರಿ ಮತ್ತು ಖಾಸಗಿ ಪ್ರದೇಶಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು ಸೋಮವಾರ ಸಂಜೆ ವೇಳೆಗೆ ಖಚಿತ ಮಾಹಿತಿ ಲಭ್ಯವಾಗಲಿದೆ. ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಿಖರ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ನಾನಾ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಶನಿವಾರ ವಿಡಿಯೋ ಸಂವಾದ ನಡೆಸಿದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.
ಸಕಾ೯ರಿ ಮತ್ತು ಖಾಸಗಿ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಲ್ಲದೆ, ಬಿಡಿಎ, ವಸತಿ ಇಲಾಖೆ ಮತ್ತು ಖಾಸಗಿ ನಿಮಾ೯ಣ ಸಂಸ್ಥೆಗಳು ನಿಮಿ೯ಸಿರುವ ವಸತಿ ಸಮುಚ್ಚಯಗಳು, ಸಕಾ೯ರಿ ಮತ್ತು ಖಾಸಗಿ ಕ್ರೀಡಾ ಸಂಕಿಣ೯ಗಳು, ಕ್ರೀಡಾಂಗಣಗಳು, ಹಾಸ್ಟೆಲ್‌ಗಳು ಮತ್ತು ಬೃಹತ್‌ ವಾಣಿಜ್ಯ ಸಮುಚ್ಛಯಗಳನ್ನು ಕೋವಿಡ್‌ ಚಿಕಿತ್ಸೆ ಉದ್ದೇಶಕ್ಕೆ ಬಳಸಿಕೊಳ್ಳಲು ನಿಧ೯ರಿಸಲಾಗಿದೆ. ಇವುಗಳನ್ನು ಸೌಲಭ್ಯಗಳ ಆಧಾರದ ಮೇಲೆ ಕೋವಿಡ್‌ ಚಿಕಿತ್ಸಾ ಆಸ್ಪತ್ರೆ ಮತ್ತು ಕೋವಿಡ್‌ ಕೇರ್‌ ಸೆಂಟರ್‌ಗಳಾಗಿ ಪರಿವತಿ೯ಸಲಾಗುವುದು ಎಂದರು.
ವಿಂಗಡಣೆ : ವೆಂಟಿಲೇಟರ್‌, ಹೈ ಪ್ಲೊ ಆಕ್ಸಿಜನ್‌ ಮತ್ತು ಇತರೆ ಅಗತ್ಯ ಸೌಲಭ್ಯಗಳಿರುವ ಕಡೆ ಕೋವಿಡ್‌ ಆಸ್ಪತ್ರೆಗಳನ್ನಾಗಿ ಪರಿವತಿ೯ಸಲಾಗುವುದು. ನಗರದಲ್ಲಿ ಕಳೆದ ಒಂದು ವಾರದಿಂದ ಈಚೆಗೆ ಕೊರೋನಾ ಸೋಂಕಿತರ ಪೈಕಿ ಶೇಕಡಾ ಮುವತ್ತರಿಂದ ಐವತ್ತರವರೆಗೆ ರೋಗದ ಲಕ್ಷಣ ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸೋಂಕಿತರ ಲಕ್ಷಣ ಆಧರಿಸಿ ಲಘು ಮಧ್ಯಮ ಮತ್ತು ತೀವ್ರ ಸ್ವರೂಪ ಎಂದು ವಿಂಗಡಿಸಿ ಚಿಕಿತ್ಸೆ ನೀಡಲು ನಿಧ೯ರಿಸಲಾಗಿದೆ. ಇದಕ್ಕಾಗಿ ಚಿಕಿತ್ಸಾ ವಿಧಾನದ ವಿಧಿ -ವಿಧಾನಗಳನ್ನು ಅಂತಿಮಗೊಳಿಸಲು ತಜ್ಞರಿಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.


ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ ಐವತ್ತರಷ್ಟು ಹಾಸಿಗೆಗಳನ್ನು ಕೋವಿಡ್‌ ಚಿಕಿತ್ಸೆಗೆ ಬಿಟ್ಟುಕೊಡಲು ಸೂಚನೆ ನೀಡಲಾಗಿದೆ. ಮಾಲೀಕರ ಜತೆ ಸೋಮವಾರ ಮಾತುಕತೆ ನಡೆಸಲಾಗುವುದು. ಅವರಿಗೆ ನಿಗದಿತ ದರ ನೀಡಲಾಗುವುದು. ಆ ಕುರಿತು ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲಾಗುವುದು. ಹಾಗೆಯೇ ಖಾಸಗಿ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳನ್ನು ಬಹುತೇಕ ಪೂಣ೯ ಪ್ರಮಾಣದಲ್ಲಿ ಬಳಸಿಕೊಳ್ಳುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದರು.
ಪರಿಶೀಲನೆ : ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಹೆಚ್ಚಿನ ಸೌಲಭ್ಯ ಅಗತ್ಯವಿಲ್ಲ. ಹೀಗಾಗಿ ಬಿಡಿಎ, ವಸತಿ ಇಲಾಖೆ ನಿಮಿ೯ಸಿ ಸಿದ್ಧಗೊಂಡಿರುವ ಬಹುಮಹಡಿ ವಸತಿ ಸಮುಚ್ಛಯಗಳನ್ನು ಬಳಸಲಾಗುವುದು. ಬಿಡಿಎ ಬಳಿ ೧೭೦೦ ಫ್ಲಾಟ್‌ಗಳಿವೆ. ಅವುಗಳಲ್ಲಿ ಬಳಕೆಗೆ ಲಭ್ಯವಿರುವ ನಿಖರ ಸಂಖ್ಯೆಯನ್ನು ಸೋಮವಾರ ತಿಳಿಸುವುದಾಗಿ ಆಯುಕ್ತ ಮಹದೇವ್‌ ತಿಳಿಸಿದ್ದಾರೆ. ಅದರ ಜತೆ ವಸತಿ ಇಲಾಖೆ, ರೇರಾದಲ್ಲಿ ನೋಂದಣಿಯಾಗಿರುವ ಖಾಸಗಿ ವಲಯದ ಮೂರು ಸಾವಿರ ಪ್ರಾಜೆಕ್ಟ್‌ಗಳಲ್ಲಿ ಲಭ್ಯವಾಗುವ ವಸತಿ ಸಮುಚ್ಛಯದ ವಿವರಗಳು ಲಭ್ಯವಾಗಲಿವೆ. ಎಲ್ಲವನ್ನೂ ಅಧಿಕಾರಿಗಳು ಖುದ್ದು ಪರಿಶೀಲಿಸಿ ಅಂತಿಮ ನಿಧಾ೯ರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದರ ಜತೆಗೆ ಕ್ರೀಡಾ ಇಲಾಖೆ ಮತ್ತು ಖಾಸಗಿ ಅವರ ಒಡೆತನದಲ್ಲಿರುವ ಕ್ರೀಡಾಂಗಣ, ಕ್ರೀಡಾ ಸಮುಚ್ಛಯಗಳು, ಹಾಸ್ಟೆಲ್‌ಗಳು ಮತ್ತು ಬೃಹತ್‌ ವಾಣಿಜ್ಯ ಸಮುಚ್ಛಯಗಳ ಮಾಹಿತಿ ಕೂಡ ಕಲೆ ಹಾಕಲಾಗುತ್ತಿದೆ. ಒಟ್ಟಾರೆ ಕನಿಷ್ಟ ಹತ್ತು ಸಾವಿರ ಹಾಸಿಗೆಗಳ ಸೌಲಭ್ಯವನ್ನು ಸಿದ್ಧಗೊಳಿಸಲು ಅಧಿಕಾರಿಗಳು ಸಮರೋಪಾದಿಯಲ್ಲಿ ಕಾಯ೯ ನಿವ೯ಹಿಸುತ್ತಿದ್ದಾರೆ. ತಾವು ಕೂಡ ಅದನ್ನು ಉಸ್ತುವಾರಿ ನೋಡುತ್ತಿರುವುದಾಗಿ ಹೇಳಿದರು.
ಊಟ – ಶುಚಿತ್ವ : ಹೀಗೆ ಗುರುತಿಸಿದ ಪ್ರದೇಶಗಳಲ್ಲಿ ಚಿಕಿತ್ಸೆಗೆ ಅಗತ್ಯವಿರುವ ಸೌಲಭ್ಯಗಳನ್ನು ಖಾಸಗಿ ನೆರವಿನಲ್ಲಿ ಅಭಿವೃದ್ಧಿಪಡಿಸಲಾಗುವುದು. ಉಳಿದಂತೆ ಸ್ವಚ್ಛತೆಗೆ ನಗರದಲ್ಲಿರುವ ನೂರಾರು ಖಾಸಗಿ ಕಂಪನಿಗಳ ನೆರವನ್ನೂ ಪಡೆಯಲಾಗುವುದು. ಸುರಕ್ಷತೆಗೆ ರಾಜ್ಯ ಮೀಸಲು ಪೋಲೀಸ್‌, ನಗರ ಸಶಸ್ತ್ರ ಮೀಸಲು ಪಡೆಗಳಲ್ಲದೆ, ಗೃಹ ರಕ್ಷಕ ದಳ, ಎನ್‌ಸಿಸಿ ಕೆಡೆಟ್‌ಗಳಲ್ಲದೆ, ನಗರದಲ್ಲಿ ಕೇಂದ್ರ ಹೊಂದಿರುವ ಅರೆ ಮಿಲಿಟರಿ ಪಡೆಗಳ ನೆರವು ಪಡೆಯಲಾಗುವುದು ಎಂದು ಸ್ಪಷ್ಟಪಡಿಸಿದರು.
ವಿಡಿಯೋ ಸಂವಾದದಲ್ಲಿ ಅಪರ ಮುಖ್ಯ ಕಾಯ೯ದಶಿ೯ ಜಾವೇದ್‌ ಅಖ್ತರ್‌, ಬಿಡಿಎ ಆಯುಕ್ತ ಡಾ. ಎಂ. ಮಹದೇವ್‌, ವೈದ್ಯಕೀಯ ಶಿಕ್ಷಣ ಇಲಾಖೆ ಕಾಯ೯ದಶಿ೯ ಟಿ.ಕೆ. ಅನಿಲ್‌ ಕುಮಾರ್‌, ರೇರಾ ಕಾಯ೯ದಶಿ೯ ಲತಾಕುಮಾರಿ, ಕ್ರೀಡಾ ಇಲಾಖೆ ಆಯುಕ್ತ ಶ್ರೀನಿವಾಸ್‌, ವೈದ್ಯಕೀಯ ಶಿಕ್ಷಣ ಇಲಾಖೆ ನಿದೇ೯ಶಕ ಡಾ. ಗಿರೀಶ್‌ ಮತ್ತು ಇತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Related posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

September 18, 2026
ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

September 18, 2026

ಭಯ ಬೇಡ, ಮುನ್ನೇಚ್ಚರಿಕೆ ಅಗತ್ಯ
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ೧೧,೦೦೫ ಇದ್ದರೆ ಗುಣಮುಖರಾಗುತ್ತಿರುವ ಸಂಖ್ಯೆ ೬,೯೧೬ರಷ್ಟಿದೆ. ಸಕ್ರೀಯ ಪ್ರಕರಣಗಳು ೩,೯೦೫ ಇವೆ. ಇದುವರೆಗೆ ೧೮೦ ಮಂದಿ ಕೋವಿಡ್‌ ಸಂಬಂಧ ಸಾವಿಗೀಡಾಗಿದ್ದಾರೆ. ರಾಷ್ಟ್ರೀಯ ಮರಣ ಪ್ರಮಾಣಕ್ಕೆ ಹೋಲಿಕೆ ಮಾಡಿದರೆ ರಾಜ್ಯದ ಮರಣ ಪ್ರಮಾಣ ಶೇಕಡಾ ಐದರಷ್ಟು ಕಡಿಮೆಯಿದೆ. ಕಳೆದ ಒಂದು ವಾರದಿಂದ ನಗರದಲ್ಲಿ ಸೋಂಕಿತರಾಗುವವರಲ್ಲಿ ಅಧ೯ದಷ್ಟು ಮಂದಿಗೆ ರೋಗ ಲಕ್ಷಣ ಕಾಣಿಸುತ್ತಿದೆ. ಹವಾಮಾನ ಬದಲಾವಣೆ ಇದಕ್ಕೆ ಕಾರಣವಿರಬಹುದು. ರೋಗದಿಂದ ಸಾವಿಗೀಡಾಗುವ ಪ್ರಮಾಣ ಇತರೆ ಸೋಂಕುಗಳಿಗೆ ಹೋಲಿಸಿದರೆ ಕಡಿಮೆ. ಹೀಗಾಗಿ ಜನತೆ ಭಯ ಪಡುವ ಅಗತ್ಯವಿಲ್ಲ. ಆದರೆ ಮುನ್ನೇಚ್ಚರಿಕೆ ಕ್ರಮ ತೆಗೆದುಕೊಳ್ಳುವ ಅವಶ್ಯವಿದೆ. ಸಕಾ೯ರ ಪ್ರಮಾಣಿಕವಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಈ ಹಂತದಲ್ಲಿ ಜನರ ಸಹಕಾರ ಅಗತ್ಯವಿದೆ ಎಂದು ಸಚಿವ ಸುಧಾಕರ್‌ ಮನವಿ ಮಾಡಿದರು.

ವೈದ್ಯಕೀಯ ಶಿಕ್ಷಣ ಸಚಿವರ ಪ್ರತಿಕ್ರಿಯೆ

ʼಕೊರೋನಾ ಇತರೆ ಸೋಂಕುಗಳಂತೆ ಭಯಪಡುವ ವ್ಯಾದಿ ಅಲ್ಲ. ಸೂಕ್ತ ಚಿಕಿತ್ಸೆ ಮೂಲಕ ರೋಗದ ವಿರುದ್ಧ ಗೆಲುವು ಸಾಧಿಸಬಹುದು. ಹಿರಿಯರಿಗೆ ಸೋಂಕು ಕಾಣಿಸಿಕೊಂಡ ತಕ್ಷಣ ಚಿಕಿತ್ಸೆ ಪಡೆದರೆ ಸುಧಾರಿಸಿಕೊಳ್ಳುತ್ತಾರೆ. ಹೀಗಾಗಿ ಮುನ್ನೇಚ್ಚರಿಕೆ ವಹಿಸುವ ಅಗತ್ಯವಿದೆʼ – ಡಾ. ಕೆ. ಸುಧಾಕರ್‌, ವೈದ್ಯಕೀಯ ಶಿಕ್ಷಣ ಸಚಿವರು

Tags: coronavirusDr. K Sudhakarkarnatakakarnataka state
ShareTweetSendShare
Join us on:

Related Posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

by Shwetha
September 18, 2026
0

ಮೈಸೂರು: ಟಿ ನರಸೀಪುರದ ಇನ್‌ಸ್ಪೆಕ್ಟರ್ ಧನಂಜಯ ಅವರ ವಿವಾದಾತ್ಮಕ ನಡೆ ಈಗ ಇಡೀ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ತಾವು ನೀಡಿದ್ದ ವಿವಾದಾತ್ಮಕ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYC ಗಡುವು ವಿಸ್ತರಣೆ: ಅಕ್ಟೋಬರ್ 20ರವರೆಗೆ ಅವಕಾಶ, ನ್ಯಾಯಬೆಲೆ ಅಂಗಡಿ ಸಮಯವೂ ಬದಲಾವಣೆ

by Shwetha
September 18, 2026
0

ಕರ್ನಾಟಕದ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ರೇಷನ್ ಕಾರ್ಡ್‌ಗಳ e-KYC ಪೂರ್ಣಗೊಳಿಸಲು ನಿಗದಿಪಡಿಸಿದ್ದ ಸೆಪ್ಟೆಂಬರ್ 30ರ ಗಡುವನ್ನು...

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

by Shwetha
September 18, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಖಡಕ್ ಮಾತುಗಳಿಗೆ ಹೆಸರಾದ ಸಿದ್ದರಾಮಯ್ಯನವರು ಇಂದು ಅತ್ಯಂತ ಭಾವುಕವಾಗಿ ಮತ್ತು ಮಾರ್ಮಿಕವಾಗಿ ಮಾತನಾಡಿದ್ದಾರೆ. ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಈಗ ಎಷ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram