ವಿಜಯಪುರ: ದೇವರ ಮೂರ್ತಿ ತೊಳೆಯಲು ನೀರಿಗೆ ಇಳಿದ ಸಹೋದರರಿಬ್ಬರು ನೀರು ಪಾಲಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಹತ್ತಿರ ಇರುವ ಕೃಷ್ಣಾ ನದಿಯಲ್ಲಿ ನಡೆದಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ದೇವರ ಪಲ್ಲಕ್ಕಿ ತೊಳೆಯಲು ಹಾಗೂ ಪುಣ್ಯಸ್ನಾನ ಮಾಡಲು ನದಿಗೆ ಇಳಿದಿದ್ದ ಸಹೋದರರಿಬ್ಬರು ನೀರು ಪಾಲಾಗಿದ್ದಾರೆ.
ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಯಶಸ್ವಿ ರಾಜು ಮಾದರ(13) ಮತ್ತು ಶ್ರೀಧರ ಶಿವಪ್ಪ ಮಾದರ ಅಲಿಯಾಸ್ ದೊಡ್ಡಮನಿ(10) ಸಾವನ್ನಪ್ಪಿರುವ ದುರ್ದೈವಿಗಳು ಎನ್ನಲಾಗಿದೆ. ಈ ಭಾಗದಲ್ಲಿ ನದಿಯಲ್ಲಿ ದೇವರನ್ನು ತೊಳೆದು ಯುಗಾದಿ ದಿನ ಪೂಜೆ ಮಾಡುವುದು ವಾಡಿಗೆ. ಬಾಲಕರು ಕೂಡ ಪಲ್ಲಕ್ಕಿಯೊಂದಿಗೆ ಆಗಮಿಸಿ ಸಾವನ್ನಪ್ಪಿದ್ದಾರೆ. ಈ ಕುರಿತು ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.