ಬೆಂಗಳೂರು: ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಪಕ್ಷ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರವ್ಮಿ, ಪ್ರಜ್ವಲ್ ನನ್ನು ಅಮಾನತು ಮಾಡಬೇಕೆಂದು ನಿನ್ನೆಯೇ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷವು ಅಮಾನತು ಮಾಡಿದೆ ಎಂದು ಹೇಳಿದ್ದಾರೆ.
ಪೆನ್ಡ್ರೈವ್ ಬಲೆಯಲ್ಲಿ ಸಿಲುಕಿವ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿವೆ. ಹಾಸನ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಈತ ಮನುಷ್ಯನೇ ಅಲ್ಲ. ಮನುಷ್ಯ ಕುಲದಲ್ಲಿ ಹುಟ್ಟಿಲ್ಲ. ದೇವೇಗೌಡರ ಮೊಮ್ಮಗ ಅಂತ ಬಿಡಬಾರದು. ಈ ಕೂಡಲೇ ಪ್ರಜ್ವಲ್ ಬಂಧಿಸುವಂತೆ ಘೋಷಣೆ ಕೂಗಿ ಆಕ್ರೋಶ ಹೊರಹಾಕಲಾಗಿದೆ.
ಪ್ರಜ್ವಲ್ ವಿರುದ್ಧ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣವನ್ನು ಈಗಾಗಗಲೇ ಎಸ್ಐಟಿ ಅಧಿಕೃತವಾಗಿ ಕೈಗೆತ್ತಿಕೊಂಡಿದೆ. ಎಸ್ಐಟಿ ಮುಖ್ಯಸ್ಥ ಬಿ.ಕೆ ಸಿಂಗ್ ನೇತೃತ್ವದ ತಂಡ ಈ ಕುರಿತು ತನಿಖೆ ನಡೆಸುತ್ತಿದೆ. ಎಸ್ಐಟಿ ತನಿಖೆ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ತಲೆ ಮರೆಸಿಕೊಂಡಿದ್ದಾರೆ. ಇನ್ನೊಂದೆಡೆ ಎಚ್.ಡಿ. ರೇವಣ್ಣ ರಾಜ್ಯದಲ್ಲಿಯೇ ಇದ್ದರೂ ಕಣ್ಮರೆಯಾಗಿದ್ದಾರೆ.