ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ವಿನಯ್ ಶರ್ಮಾ, ತಿಹಾರ್ ಸೆಂಟ್ರಲ್ ಜೈಲಿನಲ್ಲಿರುವ ತನ್ನ ಜೈಲಿನ ಗೋಡೆಗೆ ತಲೆ ಬಡಿದ ನಂತರ, ಈ ಬಾರಿ ಸ್ಟೇಪ್ಲರ್ ಪಿನ್ ನುಂಗಲು ಪ್ರಯತ್ನಿಸಿದ್ದಾನೆ. ಆದರೆ ಜೈಲಿನ ಅಧಿಕಾರಿಗಳು ಅವನ ಮೇಲೆ ಹದ್ದಿನ ಕಣ್ಣು ಇಟ್ಟಿದ್ದರಿಂದ ತನ್ನ ಯೋಜನೆಯನ್ನು ಕಾರ್ಯಗತಗೊಳಿಸಲು ಆತನಿಗೆ ಸಾಧ್ಯವಾಗಲಿಲ್ಲ.
ವಿನಯ್ ಹಾಗೆ ಮಾಡುವುದನ್ನು ತಡೆದ ಅಧಿಕಾರಿಗಳು ಕೂಡಲೇ ಅವನನ್ನು ಜೈಲಿನ ಆಸ್ಪತ್ರೆಗೆ ಕರೆದೊಯ್ದರು.
ಕೆಲವು ದಿನಗಳ ಹಿಂದೆ, ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿರುವ ಸೆಲ್ ಗೋಡೆಗೆ ತಲೆ ಬಡಿದು ತನ್ನನ್ನು ತಾನೇ ಗಾಯ ಮಾಡಿಕೊಂಡಿದ್ದ. ಆ ಸಂದರ್ಭದಲ್ಲಿ ಆತನಿಗಾಗಿದ್ದ ಸಣ್ಣಪುಟ್ಟ ಗಾಯಗಳಿಗೆ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಇದಕ್ಕೂ ಮುನ್ನ ಶನಿವಾರ, ತಾನು ಮಾನಸಿಕ ಅಸ್ವಸ್ಥನಾಗಿದ್ದು, ಚಿಕಿತ್ಸೆಗೆ ಸಮಯ ಕೋರಿ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿತ್ತು.
ಹೆಚ್ಚುವರಿ ಅಧಿವೇಶನ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಮಾನಸಿಕ ಅಸ್ವಸ್ಥತೆಯ ಯಾವ ಲಕ್ಷಣಗಳು ಕಾಣುತ್ತಿಲ್ಲ ಎಂದು ವಿನಯ್ ಕುಮಾರ್ ಶರ್ಮಾ ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿದ್ದರು. ಮರಣದಂಡನೆ ಶಿಕ್ಷೆಯ ಸಂದರ್ಭದಲ್ಲಿ ಸಾಮಾನ್ಯ ಆತಂಕ ಮತ್ತು ಖಿನ್ನತೆ ಸಾಮಾನ್ಯ ಎಂದ ನ್ಯಾಯಾಲಯ ನಿಯಮಗಳ ಪ್ರಕಾರ ಅಪರಾಧಿಗಳ ಸಮರ್ಪಕ ಆರೈಕೆಯನ್ನು ಖಚಿತಪಡಿಸಿಕೊಳ್ಳಲು ಜೈಲು ಅಧೀಕ್ಷಕರಿಗೆ ಮತ್ತೊಮ್ಮೆ ನಿರ್ದೇಶಿಸಲಾಗಿದೆ ಎಂದು ಹೇಳಿತ್ತು.
fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”
ಕ್ರೊವೇಶಿಯಾ..! ಜಗತ್ತಿನ ಒಂದು ಪುಟ್ಟ ರಾಷ್ಟ್ರ. ಅಂದಾಜು 42 -43 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ದೇಶ. ಆದ್ರೆ ಈ ದೇಶಕ್ಕೆ ತನ್ನದೇ ಆದ ಪ್ರಾಚೀನ ಇತಿಹಾಸವೂ ಇದೆ....








