ಬೆಂಗಳೂರು: ನಟ ದರ್ಶನ್ (Challenging Star Darshan) ಆಂಡ್ ಗ್ಯಾಂಗ್ ನಿಂದ ಕೊಲೆಯಾಗಿದ್ದಾರೆ ಎನ್ನಲಾಗಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ತಂದೆ-ತಾಯಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಮಾಜಿ ಸಚಿವ ಆಂಜನೇಯ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಭೇಟಿಯಾದ ಪೋಷಕರು ಸಿಎಂ ಮುಂದೆ ಕಣ್ಣೀರು ಸುರಿಸಿದ್ದಾರೆ. ಸಿಎಂ ಭೇಟಿ ಸಂದರ್ಭದಲ್ಲಿ ತಮ್ಮ ಮನೆಯ ಪರಿಸ್ಥಿತಿ ಕುರಿತು ಹೇಳಿಕೊಂಡು ರೇಣುಕಾಸ್ವಾಮಿ ತಂದೆ-ತಾಯಿ ಗೋಳಾಡಿದ್ದಾರೆ. ಪೊಲೀಸರ ತನಿಖೆ ಕುರಿತು ಸಮಾಧಾನ ವ್ಯಕ್ತಪಡಿಸಿದ ರೇಣುಕಾಸ್ವಾಮಿ ತಂದೆ-ತಾಯಿ, ಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಸಾಂತ್ವನ ಹೇಳಿ, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಜೂನ್ 8 ರಂದು ರೇಣುಕಾಸ್ವಾಮಿಯನ್ನು ಅಪಹರಿಸಿ, ಬೆಂಗಳೂರಿಗೆ ಕರೆ ತಂದು ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ನ್ನು ಅರೆಸ್ಟ್ ಮಾಡಲಾಗಿದೆ.