ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡ (HD Deve Gowda)ರ ಹಿರಿಯ ಮಗ ರೇವಣ್ಣ(HD Revanna) ಕುಟುಂಬ ಕಾನೂನಿನ ಸಂಕಷ್ಟಕ್ಕೆ ಸಿಲುಕಿದೆ. ಸಹಜವಾಗಿ ಜೆಡಿಎಸ್ ಗೂ ಇದು ಮುಜುಗರ ಉಂಟು ಮಾಡುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ಜೆಡಿಎಸ್ ಮುಂದಾಗಿದೆ.
ಮಂಡ್ಯದಿಂದ ಗೆದ್ದು ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಹೀಗಾಗಿ ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಜಿಲ್ಲೆಯ ದಳಪತಿಗಳು ದೊಡ್ಡ ದೊಡ್ಡ ಫ್ಲೆಕ್ಸ್ ಗಳನ್ನು ಹಾಕಲಾಗಿದೆ. ಆದರೆ, ಈ ಫ್ಲೆಕ್ಸ್ ನಲ್ಲಿ ಮಾಜಿ ಸಚಿವ ರೇವಣ್ಣ ಭಾವಚಿತ್ರಕ್ಕೆ ಕೊಕ್ ನೀಡಲಾಗಿದೆ. ಬಿಜೆಪಿಯ ಹಲವು ನಾಯಕರ ಫೋಟೋಗಳು ಇವೆ. ಆದರೆ, ರೇವಣ್ಣ ಫೋಟೋ ಮಾತ್ರ ಕಾಣುತ್ತಿಲ್ಲ.
ಮಾಜಿ ಸಂಸದ ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದ ಕಿಡ್ನಾಪ್ ಕೇಸ್ ನಲ್ಲಿ ರೇವಣ್ಣ ಜೈಲು ಪಾಲಾಗಿ ಬಂದಿದ್ದು. ಭವಾನಿ ರೇವಣ್ಣ ಬೇಲ್ ಮೇಲೆ ಹೊರಗಿದ್ದಾರೆ. ಪ್ರಜ್ವಲ್ ಜೈಲು ಪಾಲಾದ್ರೆ, ಸೂರಜ್ ಸಿಐಡಿ ಕಸ್ಟಡಿಯಲ್ಲಿ ಇದ್ದಾನೆ. ಹೀಗಾಗಿ ಇದು ಜೆಡಿಎಸ್ ಗೆ ಸಾಕಷ್ಟು ಮುಜುಗರ ತಂದಿದೆ. ಹೀಗಾಗಿ ರೇವಣ್ಣ ಕುಟುಂಬವನ್ನು ಜೆಡಿಎಸ್ ದೂರ ಇಟ್ಟಿದೆ.