ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಮತ್ತೆ ಕಾಂಗ್ರೆಸ್ ನಲ್ಲಿ ಬಿರುಗಾಳಿ ಬಿಸಿದ ಸಿಎಂ, ಡಿಸಿಎಂ

ಕಾಂಗ್ರೆಸ್ ನಲ್ಲಿ ಶುರುವಾಗಿದೆ ಸಿಎಂ, ಡಿಸಿಎಂ ಜಗಳ

Author2 by Author2
June 27, 2024
in State, ನ್ಯೂಸ್ ಬೀಟ್, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದೇ ಬಂದಿದ್ದು, ಸಿಎಂ, ಡಿಸಿಎಂ ಜಗಳ ತಣ್ಣಗಾಗುತ್ತಲೇ ಇಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಣ್ಣಗಿದ್ದ ಈ ಜಗಳ ಮತ್ತೆ ಈಗ ಭುಗಿಲೆದ್ದಿದೆ. ಸಿದ್ದು ಬಣ, ಡಿಕೆಶಿ ಬಣದ ಮಧ್ಯೆ ಈಗ ಒಳಸಂಚು ಶುರುವಾಗಿದೆ.

ಡಿಕೆಶಿ ಬಣ ಸಿಎಂ ಸ್ಥಾನಕ್ಕಾಗಿ ಲಾಬಿ ನಡೆಸುವ ತಂತ್ರ ಹೆಣೆದಿತ್ತು. ಆಗ ಸಿದ್ದು ಬಣದಿಂದ ಜಾತಿಗೊಂದು ಡಿಸಿಎಂ ಹುದ್ದೆಯ ಕೂಗು ಎದ್ದಿತ್ತು. ಅದು ತಾರಕಕ್ಕೆ ಹೋಗಿದ್ದರಿಂದಾಗಿ ಈಗ ಮತ್ತೆ ಡಿಕೆಶಿ ಬಣ ರಂಗೋಲಿ ಕೆಳಗೆ ನುಸುಳಿದಂತಿದೆ. ಈ ಫೈಟ್ ಈಗ ಬಿರುಗಾಳಿ ಸೃಷ್ಟಿಸುವ ಎಲ್ಲಾ ಸಾಧ್ಯತೆಗಳನ್ನು ತೋರಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಬಣದ ಅಸ್ತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಬಣ ಪ್ರತ್ಯಾಸ್ತ್ರ ಪ್ರಯೋಗ ಮಾಡುತ್ತಿದ್ದು, ಈಗ ಡಿಕೆ ಬಣಕ್ಕೆ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ದಾಳವಾಗಿದ್ದಾರೆ. ಈ ದಾಳವನ್ನೇ ಮುಂದಿಟ್ಟುಕೊಂಡು ಡಿಕೆಶಿ ಬಣ ಬ್ರಹ್ಮಾಸ್ತ್ರವನ್ನೇ ಹೂಡಿದೆ ಅನಿಸುತ್ತಿದೆ.
ಲೋಕಸಭೆ ಚುನಾವಣೆಗೂ ಮುನ್ನ ಹೆಚ್ಚುವರಿ ಡಿಸಿಎಂ ಚರ್ಚೆಯನ್ನು ಸಿದ್ದು ಆಪ್ತ ಬಣದ ಸಚಿವ ಕೆ ಎನ್‌ ರಾಜಣ್ಣ ಮುನ್ನಲೆಗೆ ತಂದಿದ್ದರು. ಡಾ. ಜಿ ಪರಮೇಶ್ವರ್‌, ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್‌ ಅವರಂತಹ ಘಟನಾನುಘಟಿ ನಾಯಕರು ಇದಕ್ಕೆ ಧ್ವನಿಯಾಗಿ ನಿಂತಂತೆ ತೋರಿಸಿದರು. ಅಲರ್ಟ್ ಆದ ಡಿಕೆ ಶಿವಕುಮಾರ್ ಹೈಕಮಾಂಡ್‌ ಮನವೋಲಿಸಿ ಸಿದ್ದು ಬಣಕ್ಕೆ ವಾರ್ನಿಂಗ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು.

Related posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

April 5, 2026
ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

April 5, 2026

ಹೆಚ್ಚುವರಿ ಡಿಸಿಎಂ ಬೇಡಿಕೆಗೆ ಹೈಕಮಾಂಡ್‌ ಮಣಿಯದಂತೆ ಡಿಕೆಶಿ ಲೋಕಸಭೆಯಲ್ಲಿ ಒಕ್ಕಲಿಗ ಮತಗಳನ್ನು ಸೆಳೆಯುವ ಭರವಸೆ ನೀಡಿದ್ದರು. ಅಲ್ಲದೆ, ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಹಿನ್ನಲೆಯಲ್ಲಿ ಆ ಸಮುದಾಯದ ಮತಗಳನ್ನು ಸೆಳೆಯಲು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ತಪ್ಪು ಸಂದೇಶ ನೀಡುತ್ತದೆ ಎಂಬ ವಾದ ಮುಂದಿಟ್ಟಿದ್ದರು. ಹೀಗಾದರೂ ಸಿದ್ದು ಬಣದ ಬಿಗಿಪಟ್ಟಿಗೆ ಮಣಿಯದ ಹೈಕಮಾಂಡ್‌ ಲೋಕ ಚುನಾವಣೆ ಮುಗಿಯುವವರೆಗೂ ಸುಮ್ಮನಿರುವಂತೆ ಸೂಚನೆ ನೀಡಿತ್ತು. ಆದರೆ, ಫಲಿತಾಂಶ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕಾಂಗ್ರೆಸ್‌ ಪರವಾಗಿ ಬಂದಿಲ್ಲ. ಅದರಲ್ಲೂ ಡಿಕೆ ಶಿವಕುಮಾರ್‌ ಅವರಿಗೆ ಈ ಫಲಿತಾಂಶ ತೀವ್ರ ಹಿನ್ನಡೆಯಂತೂ ಮಾಡಿತು.

ಹೀಗಾಗಿ ಫಲಿತಾಂಶದ ನಂತರ ಕೆ ಎನ್ ರಾಜಣ್ಣ ಹಾಗೂ ಅವರ ಬಣ ಮತ್ತೆ ಹೆಚ್ಚುವರಿ ಡಿಸಿಎಂ ಬೇಡಿಕೆ ಮೊಳಗಿಸಲು ಮುಂದಾದರು. ಇದರೊಂದಿಗೆ ಮತ್ತೊಂದು ದಾಳವನ್ನೂ ಉರುಳಿಸಲಾಯಿತು ಅದೇನೆಂದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ. ಸರ್ಕಾರ ರಚನೆಯ ಸಂದರ್ಭದಲ್ಲಿ ಹೈಕಮಾಂಡ್ ಕೊಟ್ಟ ಮಾತಿನಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡಬೇಕು ಹಾಗೂ ಬೇರೆ ಸಮುದಾಯಕ್ಕೆ ಅದನ್ನು ಉಡುಗೊರೆಯಾಗಿ ನೀಡಬೇಕೆಂದು ತಂತ್ರ ಹೆಣೆಯಿತು.

ಅದರಲ್ಲಿಯೂ ಪ್ರಮುಖವಾಗಿ ಲಿಂಗಾಯತ ಸಮುದಾಯಕ್ಕೆ ಅಧ್ಯಕ್ಷ ಪಟ್ಟ ಕಟ್ಟಬೇಕೆಂಬ ಪಟ್ಟನ್ನೇ ಹಿಡಿದಂತೆ ವರ್ತಿಸಲು ಆರಂಭಿಸಿತು. ಸಿಎಂ ಆಯ್ಕೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿಕೆ ಶಿವಕುಮಾರ್ ಒಬ್ಬರನ್ನೇ ಡಿಸಿಎಂ ಆಗಿ ಆಯ್ಕೆ ಮಾಡುತ್ತೇವೆ ಎಂದು ಹೈಕಮಾಂಡ್‌ ನಿರ್ಧಾರಕ್ಕೆ ಬಂದಿತ್ತು. ಈ ವೇಳೆ ಡಿಕೆ ಶಿವಕುಮಾರ್ ಲೋಕಸಭೆ ಚುನಾವಣೆ ಆಗುವ ತನಕ ಕೆಪಿಸಿಸಿ ಅಧ್ಯಕ್ಷರಾಗಿ ಇರುತ್ತಾರೆ ಎಂದು ಹೈಕಮಾಂಡ್ ಹೇಳಿತ್ತು. ಅದನ್ನು ನೆನಪು ಮಾಡಿಕೊಡಲು ಇಷ್ಟಪಡುತ್ತೇನೆ. ಎಲ್ಲ ಸಮುದಾಯದವರೂ ಅಧ್ಯಕ್ಷರಾಗಲು ಅರ್ಹರು. ಲಿಂಗಾಯತ ನಾಯಕರು ಅಧ್ಯಕ್ಷ ಸ್ಥಾನ ಕೇಳುತ್ತಿರುವುದರಲ್ಲಿ ತಪ್ಪೇನಿಲ್ಲ ಎಂದು ಸಚಿವ ಕೆ.ಎನ್ ರಾಜಣ್ಣ ವಾದಿಸಲು ಆರಂಭಿಸಿದರು.

ಆದರೆ, ವಿಷಯ ಇದಲ್ಲ, ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಬೇಡಿಕೆ ಚರ್ಚೆಗಳು ಮುನ್ನೆಲೆಗೆ ಬಂದ ಸಂದರ್ಭದಲ್ಲಿಯೇ ಸಿಎಂ ಸಿದರಾಮಯ್ಯ ಮುಂದೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಬೇಡಿಕೆ ಇಟ್ಟಿದ್ದಾರೆ. ಇದು ಡಿಕೆಶಿಗೆ ಶಕ್ತಿ ತುಂಬಿದಂತಾಗಿದೆ.

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚಂದ್ರಶೇಖರ ಸ್ವಾಮೀಜಿ, ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲೇ ಬಹಿರಂಗವಾಗಿ ಈ ಬೇಡಿಕೆಯನ್ನು ಇಟ್ಟಿದ್ದಾರೆ. ಎಲ್ಲರೂ ರಾಜ್ಯದ ಸಿಎಂ ಆಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದು ವೇದಿಕೆಯಲ್ಲಿಯೇ ಇದ್ದ ಸಿಎಂ ಸಿದ್ದರಾಮಯ್ಯ ಅವರ ಮುಜುಗರಕ್ಕೂ ಕಾರಣವಾಯಿತು.
ಆದರೆ, ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಮಾಡಬೇಕಾ? ಹೆಚ್ಚುವರಿ ಡಿಸಿಎಂ ಸ್ಥಾನ ಸೃಷ್ಟಿ ಮಾಡಬೇಕಾ? ಎಂಬ ಪ್ರಶ್ನೆಗೆ ಹೈಕಮಾಂಡ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸದ್ಯ ರಾಜ್ಯದ ಪ್ರಮುಖ ನಾಯಕರು ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದ ನಾಯಕರ ಜೊತೆಗೆ ಈ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಆದರೆ, ಅಭಿವೃದ್ಧಿ ವಿಚಾರ ಬಿಟ್ಟು ಕಾಂಗ್ರೆಸ್ ಸಿಎಂ, ಡಿಸಿಎಂಗಾಗಿ ಕಿತ್ತಾಡುತ್ತಿದ್ದರೆ, ಜನ ಛೀಮಾರಿ ಹಾಕುವುದಂತೂ ಗ್ಯಾರಂಟಿ!

Tags: cmDCM again storm in Congress
ShareTweetSendShare
Join us on:

Related Posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

by Shwetha
April 5, 2026
0

ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ...

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

by Shwetha
April 5, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಮತ್ತೊಮ್ಮೆ ಜಗಜ್ಜಾಹೀರಾಗಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಹಾಗೂ ದೇಶಾವ್ಯಾಪಿ ಅಡುಗೆ ಅನಿಲ ಪೂರೈಕೆ ವಿಚಾರದಲ್ಲಿ...

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

by Shwetha
April 5, 2026
0

ಗ್ಯಾಸ್‌ ಕೊರತೆಯಿಂದಾಗಿ ಆಟೋ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ...

ಅಸ್ ಸಲಾಮು ಅಲೈಕುಮ್ : ಸಿದ್ದರಾಮಯ್ಯ ಸಮ್ಮುಖದಲ್ಲೇ ಹಿಂದಿಯಲ್ಲಿ ಮೊಳಗಿದ ಕಾಂಗ್ರೆಸ್ ಸಂಸದೆಯ ಧ್ವನಿ ಭಾಷಾ ಹೇರಿಕೆ ವಿರೋಧಿಸುವ ಪಕ್ಷದ ಬೂಟಾಟಿಕೆ ಖಂಡಿಸಿದ ಕನ್ನಡಿಗರು

ಅಸ್ ಸಲಾಮು ಅಲೈಕುಮ್ : ಸಿದ್ದರಾಮಯ್ಯ ಸಮ್ಮುಖದಲ್ಲೇ ಹಿಂದಿಯಲ್ಲಿ ಮೊಳಗಿದ ಕಾಂಗ್ರೆಸ್ ಸಂಸದೆಯ ಧ್ವನಿ ಭಾಷಾ ಹೇರಿಕೆ ವಿರೋಧಿಸುವ ಪಕ್ಷದ ಬೂಟಾಟಿಕೆ ಖಂಡಿಸಿದ ಕನ್ನಡಿಗರು

by Shwetha
April 5, 2026
0

ಕರ್ನಾಟಕದ ರಾಜಕಾರಣದಲ್ಲಿ ಭಾಷಾ ವಿಚಾರ ಸದಾ ಸೂಕ್ಷ್ಮ ಹಾಗೂ ಮಹತ್ವದ ಪಾತ್ರ ವಹಿಸುತ್ತದೆ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸುತ್ತಾ ಬಂದಿರುವ ರಾಜ್ಯ ಕಾಂಗ್ರೆಸ್ ನಾಯಕರು...

ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಕಿಡಿ; ಹಿಂದಿ ವಿಚಾರದಲ್ಲಿ ತೀವ್ರ ಆಕ್ರೋಶ

ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಕಿಡಿ; ಹಿಂದಿ ವಿಚಾರದಲ್ಲಿ ತೀವ್ರ ಆಕ್ರೋಶ

by Shwetha
April 5, 2026
0

ರಾಜ್ಯಪಾಲ ಗೆಹೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ SSLC ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram