ಮಹಾರಾಷ್ಟ್ರ: ರೋಗಿಗೆ ಕಾಲಿನ ಶಸ್ತ್ರ ಚಿಕಿತ್ಸೆ ಮಾಡುವ ಬದಲು ವೈದ್ಯರು ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿರುವ ಘಟನೆ ನಡೆದಿದೆ.
ಕಾಲಿನ ಗಾಯದಿಂದಾಗಿ 9 ವರ್ಷದ ಬಾಲಕ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ವೈದ್ಯರು ಬಾಲಕನ ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿ ಎಡವಟ್ಟು ಮಾಡಿದ್ದಾರೆ. ಈ ಘಟನೆ ಥಾಣೆಯಲ್ಲಿ ನಡೆದಿದೆ. ಈ ಕುರಿತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ತಿಂಗಳು ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಬಾಲಕನ ಕಾಲಿಗೆ ಗಾಯವಾಗಿತ್ತು. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಅಲ್ಲಿನ ವೈದ್ಯರು ಶಸ್ತ್ರ ಚಿಕಿತ್ಸೆಗೆ ಸಲಹೆ ನೀಡಿದ್ದರು. ಹೀಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆಯ ಬಳಿಕ ಬಾಲಕನ ಖಾಸಗಿ ಅಂಗಕ್ಕೆ ಹಾಕಿರುವ ಬ್ಯಾಂಡೇಜ್ ನೋಡಿ ಪಾಲಕರು ಶಾಕ್ ಆಗಿದ್ದಾರೆ. ಆಗ ವೈದ್ಯರ ಯಡವಟ್ಟು ಬಯಲಿಗೆ ಬಂದಿದೆ.