ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಆಂಡ್ ಗ್ಯಾಂಗ್ ಈಗ ಜೈಲು ಪಾಲಾಗಿದೆ. ಈ ಬೆನ್ನಲ್ಲೇ ಚಿತ್ರರಂಗದ ಪ್ರಸ್ತುತ ಬೆಳವಣಿಗೆಯ ಬಗ್ಗೆ ಜಗ್ಗೇಶ್ ಮಾತನಾಡಿದ್ದಾರೆ. ಆದರೆ, ದರ್ಶನ್ ವಿಷಯವಾಗಿ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.
ಶಿವಾನಂದ ಸರ್ಕಲ್ನಲ್ಲಿ ಇಂದು (ಜೂನ್ 30) ನಿರ್ಮಾಪಕರ ಸಂಘದ ನೂತನ ಕಟ್ಟಡಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಟ ಜಗ್ಗೇಶ್, ಕನ್ನಡ ಚಿತ್ರರಂಗ ಸಂಕಷ್ಟದಲ್ಲಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ಪ್ರಯತ್ನಗಳು ವ್ಯರ್ಥವಾಗುತ್ತಿದೆ. ಚಿತ್ರರಂಗದವರಲ್ಲಿ ಶಿಸ್ತು ಕಮ್ಮಿಯಾಗಿದೆ. ಮುಂಚೆ ಎಲ್ಲಾ ಸಿನಿಮಾ ಮಾಡಬೇಕಾದರೆ, ಎಲ್ಲದಕ್ಕೂ ಸಮಯ ತೆಗೆದುಕೊಳ್ಳೋರು. ಬಜೆಟ್ ಲಿಸ್ಟ್ ರೆಡಿ ಮಾಡೋರು. ಆದರೆ, ಈಗ ಪರಿಸ್ಥಿತಿ ಆ ರೀತಿ ಇಲ್ಲ ಎಂದು ಹೇಳಿದ್ದಾರೆ.
ಸಿನಿಮಾಗೆ ಭಾಷೆ ಇಲ್ಲದಂಗೆ ಆಗಿದೆ. ಶಿಸ್ತು ಇರದ ಕಡೆ ಯಶಸ್ಸು ಇರುವುದಿಲ್ಲ. ಈಗಲೂ ಕಾಲ ಮಿಂಚಿಲ್ಲ. ಪ್ರಯತ್ನ ಮಾಡಿದರೆ ಸರಿಯಾಗುತ್ತದೆ ಎಂದು ಜಗ್ಗೇಶ್ ಹೇಳಿದ್ದಾರೆ. ಆದರೆ, ದರ್ಶನ್ ಅವರ ಬಗ್ಗೆ ಕೇಳಿದರೆ ಮಾತ್ರ, ನಾನು ಆ ಕುರಿತು ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.