ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ (Darshan) ಭೇಟಿ ಮಾಡಲು ನಟಿ ರಚಿತಾ ರಾಮ್(Rachita Ram) ಪರಪ್ಪನ ಅಗ್ರಹಾರದ ಜೈಲಿಗೆ ಭೇಟಿ ನೀಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅರೆಸ್ಟ್ ಆದ ಬಳಿಕ ಇದೇ ಮೊದಲ ಬಾರಿಗೆ ರಚಿತಾ ರಾಮ್ ಜೈಲಿಗೆ ಆಗಮಿಸಿದ್ದಾರೆ. ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ್, ಕಂಠೀರವ ಸ್ಟುಡಿಯೋ ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ರುದ್ರೇಶ್ ಕೂಡ ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದಿದ್ದರು.
ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ 2 ಬಾರಿಯಷ್ಟೇ ಭೇಟಿಯಾಗಲು ಅವಕಾಶವಿರುತ್ತದೆ. ಪತ್ನಿ ವಿಜಯಲಕ್ಷ್ಮೀ ಭೇಟಿಯ ನಂತರ ಈಗ ನಟಿ ರಚಿರಾಮ್ ಹಾಗೂ ಹಲವರು ಆಗಮಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...








