ಜಾರ್ಖಂಡ್ ನ ಮಾಜಿ ಸಿಎಂ ಚಂಪೈ ಸೋರೆನ್ ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಭೇಟಿಯಾದ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ಅವರು ಆಗಸ್ಟ್ 30ರಂದು ಬಿಜೆಪಿಯನ್ನು ಸೇರಲಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ಜಾರ್ಖಂಡ್ ನ ಆದಿವಾಸಿಗಳು, ಮೂಲನಿವಾಸಿಗಳು, ದಲಿತರು, ಹಿಂದುಳಿದವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳ ಅಭಿವೃದ್ಧಿಗೆ ನನ್ನ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.
ಪಕ್ಷದ ವರಿಷ್ಠ ಶಿಬು ಸೊರೆನ್ಗೆ ಬರೆದ ರಾಜೀನಾಮೆ ಪತ್ರದಲ್ಲಿ ಜೆಎಂಎಂ ಪಕ್ಷದ ಸ್ಥಿತಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಶಿಬು ಸೊರೆನ್ ಅವರ ಮಾರ್ಗದರ್ಶನದಲ್ಲಿ ನಾನು ಮತ್ತು ಇತರ ಪಕ್ಷದ ಕಾರ್ಯಕರ್ತರು ಹೋರಾಡಿದ ಆದರ್ಶಗಳಿಂದ ಜೆಎಂಎಂ ದೂರ ಸರಿದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಿನ್ನೆಯಷ್ಟೇ ಚಂಪೈ ಸೊರೆನ್ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರುವ ನಿರ್ಧಾರವನ್ನು ಜಾರ್ಖಂಡ್ನ ಹಿತಾಸಕ್ತಿಯಿಂದ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದರು. ಈಗ ಅದನ್ನು ಖಚಿತ ಪಡಿಸಿದ್ದಾರೆ.








