ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ರನ್ನು ಈಗ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಹೀಗಾಗಿ ಪತ್ನಿ ವಿಜಯಲಕ್ಷ್ಮಿ (Vijayalakshmi) ಬಳ್ಳಾರಿ ಜೈಲಿಗೆ ಶನಿವಾರ ಭೇಟಿ ನೀಡಿ, ದರ್ಶನ್ ಆರೋಗ್ಯ ವಿಚಾರಿಸಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ಐಷಾರಾಮಿ ಜೀವನ ಸಾಗಿಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದರ್ಶನ್ ರನ್ನು ಎರಡು ದಿನಗಳ ಹಿಂದೆಯಷ್ಟೇ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶೀಫ್ಟ್ ಮಾಡಲಾಗಿತ್ತು. ಹೀಗಾಗಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಗೆ ಆಗಮಿಸಿ, ಜೈಲಿನಲ್ಲಿ ದರ್ಶನ್ ರನ್ನು ಭೇಟಿ ಮಾಡಿದ್ದಾರೆ. ಬಳ್ಳಾರಿಗೆ ವಿಜಯಲಕ್ಷ್ಮೀ ಒಬ್ಬರೇ ಬಂದಿದ್ದಾರೆ ಎನ್ನಲಾಗಿದೆ.
ಪ್ರತಿ ವಾರ ಪುತ್ರ ವಿನೀಶ್ ಜೊತೆಗೆ ಬರುತ್ತಿದ್ದ ವಿಜಯಲಕ್ಷ್ಮೀ ಈ ವಾರವೂ ಬಂದು ಆರೋಗ್ಯ ವಿಚಾರಿಸಿದ್ದಾರೆ. ಇನ್ನೊಂದೆಡೆ ಪ್ರಕರಣದ ಕುರಿತು ಜಾರ್ಚ್ ಶೀಟ್ ಸಲ್ಲಿಸಲು ಪೊಲೀಸರು ತಯಾರಿ ನಡೆಸಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಆರಾಮಾಗಿದ್ದ ದರ್ಶನ್ ಬಳ್ಳಾರಿ ಜೈಲಿಗೆ ಬಂದು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.