ಚಿಕ್ಕೋಡಿ: ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ವೇಗವಾಗಿ ಬಂದ ಬಸ್ (Government Bus) ಹರಿದ ಪರಿಣಾಮ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿ (Belagavi) ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಹತ್ತಿರ ಈ ಘಟನೆ ನಡೆದಿದೆ. ಸುನೀಲ್ ಬಂಡರಗರ್ (10) ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ. ಟ್ಯೂಷನ್ ಮುಗಿಸಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Camera) ಸೆರೆಯಾಗಿದೆ.
ಸುನೀಲ್ ಬಂಡರಗರ್ ಎಂಬ ಬಾಲಕ ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆಂದು ಹೊರಗೆ ಬಂದಿದ್ದ. ಈ ಸಂದರ್ಭದಲ್ಲಿ ರಸ್ತೆ ದಾಟಲು ಗೆಳೆಯರೊಟ್ಟಿಗೆ ರಸ್ತೆ ಬದಿ ನಿಂತಿದ್ದ. ಸಮಯಕ್ಕೆ ಅಥಣಿಯಿಂದ ಕಾರವಾರಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಬಾಲಕನ ಮೇಲೆ ಹರಿದಿದೆ. ಆಗ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸ್ಥಳೀಯರು ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಥಣಿ ಪೊಲೀಸ್ ಠಾಣಾ (Athani Police Station) ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.