ಬೀದರ್: ಬೈಕ್ ಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲಕ್ಕೆ ಹಾರಿ ಬಿದ್ದಿರುವ ಘಟನೆ ನಡೆದಿದೆ.
ಬೀದರ್ (Bidar) ಜಿಲ್ಲೆಯ ಚಿಟ್ಟಗುಪ್ಪ (Chittaguppa) ತಾಲೂಕಿನ ನಿರ್ಣಾ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಈ ಘಟನೆ ನಡೆದಿದೆ.
ಚಿಟ್ಟಗುಪ್ಪ ತಾಲೂಕಿನ ಉಡುಬಾಳು ಗ್ರಾಮದ ಸತೀಶ್ ಶಿವಕುಮಾರ್ ಗಂಭೀರ ಗಾಯಗೊಂಡಿದ್ದು, ಮನ್ನಾಏಖೇಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೆ.4 ರಂದು ಈ ಅಪಘಾತ ಸಂಭವಿಸಿದೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮನ್ನಾಏಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








