ಮಂಡ್ಯ: ನಾಗಮಂಗಲ ಗಲಭೆ (Nagamangala Riot) ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ರಾಜ್ಯದಲ್ಲಿ ಹಿಂದೂಗಳನ್ನೇ (Hindu) ಟಾರ್ಗೆಟ್ ಮಾಡಲಾಗುತ್ತಿದೆ. ಇದು ಈ ಪ್ರಕರಣದಿಂದ ಗೋಚರವಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ನಾಗಮಂಗಲ ಪ್ರಕರಣದಲ್ಲಿ ಎ1 ನಿಂದ ಎ-23 ವರೆಗಿನ ಯುವಕರು ಹಿಂದೂಗಳೇ ಆಗಿದ್ದಾರೆ ಎಂದು ಬಿಜೆಪಿ (BJP) ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಮತ್ತಷ್ಟು ಆಕ್ರೋಶ ವ್ಯಕ್ತವಾಗುತ್ತಿವೆ.
ಗಲಭೆ ನಡೆದ ಬಳಿಕ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಆರ್ ಅಶೋಕ್, ಸಿಟಿ ರವಿ, ಅಶ್ವತ್ಥನಾರಾಯಣ, ನಾರಾಯಣ ಗೌಡ, ಪ್ರತಾಪ್ ಸಿಂಹ ಸೇರಿ ಹಲವು ಕಲವು ಕಮಲ ನಾಯಕರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಣೇಶೋತ್ಸವದ ಆಯೋಜಕರು ಮತ್ತು ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಈ ವೇಳೆ ಮಾತನಾಡಿದ ನಾಯಕರು, ಗಣೇಶನನ್ನು ಕೂರಿಸಿದ್ದು ಹಿಂದೂಗಳು (Hindu) ಕಲ್ಲು ತೂರಿದ್ದು ಮುಸ್ಲಿಂ ಯುವಕರು. ಆದರೆ ಪೊಲೀಸರ ವೈಫಲ್ಯ ಮುಚ್ಚಿಕೊಳ್ಳಲು ಹಿಂದೂಗಳನ್ನು ಬಂಧನ ಮಾಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ಕಲ್ಲು ತೂರಿದವರನ್ನು ಮೊದಲು ಆರೋಪಿಗಳನ್ನಾಗಿ ಮಾಡಬೇಕಿತ್ತು. ಆದರೆ ಗಣೇಶೋತ್ಸವ ಮಾಡಿದವರನ್ನೇ ಆರೋಪಿಗಳನ್ನಾಗಿ ಮಾಡಿದ್ದಾರೆ. ಅಲ್ಪಸಂಖ್ಯಾರ ಒಲೈಕೆಗಾಗಿ ಹಿಂದೂ ಯುವಕರನ್ನು ಆರೋಪಿಗಳನ್ನಾಗಿ ಮಾಡಿದ್ದಾರೆ. ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಅಮಾಕರು ಬಲಿಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.







