ಚಂಡೀಗಢ: ಬಿಜೆಪಿ ನಾಯಕನ ಕಾರು ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಗಾಲ್ಫ್ ಕೋರ್ಸ್ ರಸ್ತೆಯ ಬೆಲ್ವೆಡೆರೆ ಪಾರ್ಕ್ ಬಳಿಯ ಹೈಸ್ಪೀಡ್ ಲೇನ್ ನಲ್ಲಿ ಈ ಘಟನೆ ನಡೆದಿದೆ.
ಬಿಜೆಪಿ ನಾಯಕ ಕುಲದೀಪ್ ಠಾಕೂರ್ ಒನ್ ವೇಯಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ಎದುರಿಗೆ ಬಂದ ಬೈಕ್ ಗೆ ಗುದ್ದಿದ್ದಾರೆ. ಪರಿಣಾಮ ಬೈಕ್ ಸವಾರು ಅಕ್ಷತ್ ಗಾರ್ಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಅಪಘಾತದ ದೃಶ್ಯ ಬೈಕರ್ ಸ್ನೇಹಿತನ ಗೊಪ್ರೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಕುರಿತು ಸ್ನೇಹಿತ ಪ್ರದ್ಯುಮನ್ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಬಂಧಿಸಿದ್ದ ಪೊಲೀಸರು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಸದ್ಯ ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.