ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪುತ್ರ ಸ್ಯಾಂಡಲ್ ವುಡ್ ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ವಿವಾಹಕ್ಕೆ ರಾಮನಗರದ ಜನಪದ ಲೋಕದ ಬಳಿ ಭರ್ಜರಿ ಸಿದ್ಧತೆಗಳು ಈಗಾಗಲೇ ನಡೆಯುತ್ತಿವೆ. ಜನಪದ ಲೋಕದ ಪಕ್ಕದಲ್ಲಿನ ಸೆಂಟ್ರಲ್ ಮುಸ್ಲಿಂ ಅಸೋಶಿಯೇಷನ್ ಹಾಗೂ ಉದ್ಯಮಿಯೊಬ್ಬರಿಗೆ ಸೇರಿದ ಜಾಗದಲ್ಲಿ ಅದ್ಧೂರಿ ಸೆಟ್ ನಲ್ಲಿ ಏಪ್ರಿಲ್ 17ರಂದು ವಿವಾಹ ಕಾರ್ಯ ನೆರವೇರಿಸಲು ನಿಶ್ಚಯಿಸಲಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಮಗನ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಮನದಾಳದ ಮಾತುಗಳಲ್ಲಿ ಭಾವನಾತ್ಮಕವಾಗಿ ರಾಮನಗರ ಜಿಲ್ಲೆಯ ಜನರನ್ನು ಆಹ್ವಾನಿಸಿದ್ದಾರೆ.











