ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರ ಹಿಂಗಾರು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಿದೆ.
2025-26ಕ್ಕೆ ಹಿಂಗಾರು ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (MSP) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಮೋದಿ ಅಧ್ಯಕ್ಷತೆಯಲ್ಲಿ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಮಂತ್ರಿಮಂಡಲ ಸಮಿತಿ (ಸಿಸಿಇಎ) ವ್ಯಾಪಾರ ವರ್ಷ 2025-26ಕ್ಕಾಗಿ ಸೂಚಿಸಿದ ಎಲ್ಲಾ ಬೆಳೆಗಳಿಗೆ ಎಂಎಸ್ಪಿ ಹೆಚ್ಚಿಸಲು ಅನುಮೋದನೆ ನೀಡಿದೆ. ಕುರಿ ಮೇವಿನ ಕಾಳು ಮತ್ತು ಸಾಸಿವೆಗಳಿಗೆ ಪ್ರತಿ ಕ್ವಿಂಟಲ್ ಗೆ 300 ರೂ. ಹಾಗೂ ಮಸೂರ ಬೇಳೆ ಪ್ರತಿ ಕ್ವಿಂಟಲ್ ಗೆ 275 ರೂ. ಹೆಚ್ಚಿಸಿದೆ. ಕಡಲೆ, ಗೋಧಿ, ಕುಸುಬೆ ಮತ್ತು ಬಾರ್ಲಿ ಧಾನ್ಯಗಳಿಗೆ ಪ್ರತಿ ಕ್ವಿಂಟಲ್ ಗೆ ಅನುಕ್ರಮವಾಗಿ 210 ರೂ., 150 ರೂ., 140 ರೂ. ಹಾಗೂ 130 ರೂ. ಹೆಚ್ಚಿಸಿ ಬೆಂಬಲ ಬೆಲೆ ನೀಡಲಾಗಿದೆ.
ಗೋಧಿಗೆ ಶೇ. 105, ಕುರಿ ಮೇವಿಕ ಕಾಳು ಮತ್ತು ಸಾಸಿವೆಗಳಿಗೆ ಶೇ.98, ಮಸೂರ ಬೇಳೆಗೆ ಶೇ.89, ಕಡಲೆಗೆ ಶೇ.60; ಬಾರ್ಲಿಗೆ ಶೇ.60, ಕುಸುಬೆಗೆ ಶೇ.50 ರಷ್ಟು ಹೆಚ್ಚಿಸಿ ಬೆಲೆ ನಿಗದಿ ಮಾಡಲಾಗಿದೆ.