ಕೋಲಾರ: ಚನ್ನಪಟ್ಟಣ (Channapatna) ವಿಧಾನಸಭಾ ಕ್ಷೇತ್ರಕ್ಕೆ ಸಿ.ಪಿ ಯೋಗೇಶ್ವರ್ಗೆ (CP Yogeshwar) ಟಿಕೆಟ್ ನೀಡಬೇಕು ಎಂದು ಮಾಜಿ ಸಂಸದ ಮುನಿಸ್ವಾಮಿ (S Muniswamy) ಆಗ್ರಹಿಸಿದ್ದಾರೆ.
ಕೋಲಾರ (Kolar) ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಾನು ಸಂಸದನಾಗಿದ್ದಾಗ ಜೆಡಿಎಸ್ಗೆ ಸೀಟು ಬಿಟ್ಟು ಕೊಟ್ಟಿದ್ದೇವೆ. ಕೋಲಾರ ಲೋಕಸಭಾ ಕ್ಷೇತ್ರ ಜೆಡಿಎಸ್ ಗೆ ಬಿಟ್ಟು ಕೊಟ್ಟಿದ್ದೇವೆ. ಈಗ ಕುಮಾರಸ್ವಾಮಿ ಸಹ ತಮ್ಮ ಕ್ಷೇತ್ರಕ್ಕೆ ಬಿಜೆಪಿಗೆ ಟಿಕೆಟ್ ಬಿಟ್ಟು ಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಪರ ಯೋಗೇಶ್ವರ್ ಕೆಲಸ ಮಾಡಿದ್ದಾರೆ. ಬಿಜೆಪಿಯ ಬಹುತೇಕ ನಾಯಕರ ಅಭಿಪ್ರಾಯ ಇದೇ ಆಗಿದೆ. ಹಠ ಮಾಡದೇ ಹೆಚ್ಡಿಕೆ ಸೀಟು ಬಿಟ್ಟು ಕೊಡಬೇಕು. ಇಬ್ಬರು ಸೇರಿ ಕೆಲಸ ಮಾಡಿದರೆ ಗೆಲುವು ಸಾಧ್ಯ ಎಂದಿದ್ದಾರೆ.