ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಯಾವಾಗಲೂ ಶೋಷಿತ ಸಮುದಾಯಗಳ ಪರ ನಿಂತಿದ್ದಾರೆ. ಅವರ (Siddaramaiah) ಕಷ್ಟದ ಸಮಯದಲ್ಲಿ ಶಾಸಕರು, ಸಚಿವರು, ಸಮುದಾಯಗಳು ಅವರ ಜೊತೆಗಿರಬೇಕು ಎಂದು ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ವಾಲ್ಮೀಕಿ ಜಯಂತಿ (Valmiki Jayanthi) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆದಾಗ ಉತ್ತಮವಾದ ಕೆಲಸಗಳನ್ನು ಮಾಡಿದ್ದಾರೆ. ಪ್ರತಿ ತಾಲೂಕಿನಲ್ಲಿ ಹಾಸ್ಟೆಲ್ ಮಾಡಿದ್ದಾರೆ. ಪ್ರತಿ ಹೋಬಳಿಯಲ್ಲಿ ಎಸ್ಸಿ-ಎಸ್ಟಿ ಹಾಸ್ಟೆಲ್ ಕೋಲಾರ-ಚಿಕ್ಕಬಳ್ಳಾಪುರಲ್ಲಿ ಪ್ರಾರಂಭ ಮಾಡಿದ್ದರು ಎಂದು ಹಾಡಿ ಹೊಗಳಿದ್ದಾರೆ.
ಈ ವೇಳೆ ಶೋಷಿತ ಸಮುದಾಯದ ನಿಗಮಗಳಿಗೆ ಅಭಿವೃದ್ಧಿಗಾಗಿ, ಭೂ ಒಡೆತನಕ್ಕೆ ಹೆಚ್ಚು ಒತ್ತು ನೀಡಿ ನಿಗಮಗಳಿಗೆ ಹೆಚ್ಚು ಅನುದಾನ ಬಿಡುಗಡೆ ಮಾಡಬೇಕು ಎಂದು ಸಿಎಂಗೆ ಮನವಿ ಮಾಡಿದರು.