ಚಿಕ್ಕಬಳ್ಳಾಪುರ: ವಿದ್ಯುತ್ ಶಾಕ್ (Electric shock) ತಗುಲಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಕುರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನರಸಿಂಹಪ್ಪ ಹಾಗೂ ನಾಗಮಣಿ ದಂಪತಿಗಳ ಪುತ್ರ 17 ವರ್ಷದ ಯಶವಂತ್ ಸಾವನ್ನಪ್ಪಿರುವ ದುರ್ದೈವಿಗಳು. ತಂದೆ-ತಾಯಿ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಹೀಗಾಗಿ ಹಳೆಯ ಮನೆಯೊಂದನ್ನು ಬಾಡಿಗೆ ಪಡೆದು ಜೀವನ ಸಾಗಿಸುತ್ತಿದ್ದರು.
ಮೃತ ಯಶ್ವಂತ್ ಚಿಕ್ಕಬಳ್ಳಾಪುರ ನಗರದ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಇತ್ತೀಚೆಗೆ ಸುರಿದ ಮಳೆಗೆ ಮನೆಯ ಕಲ್ಲು ಚಪ್ಪಡಿಗಳ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗಿ ಬಲ್ಬ್ಗೆ ಉರಿಯುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿದ್ಯುತ್ ಸಂಪರ್ಕ ಸರಿ ಮಾಡಲು ಯಶವಂತ್ ಮುಂದಾಗಿದ್ದಾನೆ. ಈ ವೇಳೆ ಶಾಕ್ ಹೊಡೆದು ಕೆಳಗೆ ಬಿದ್ದಿದ್ದಾನೆ.
ಸದ್ದು ಕೇಳಿ ತಾಯಿ ಒಳಗೆ ಓಡಿ ಹೋಗಿದ್ದಾರೆ. ಅಷ್ಟರಲ್ಲಿ ಮಗ ಪ್ರಜ್ಞಾ ಹೀನನಾಗಿ ಬಿದ್ದಿದ್ದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆತ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.