ಉಡುಪಿ: ಪತಿಯ ಸಾವನ್ನಪ್ಪಿದ್ದರಿಂದಾಗಿ ಮನನೊಂದ ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿ ಮೀಯಾರು ಎಂಬಲ್ಲಿ ನಡೆದಿದೆ. ಗ್ರಾಮದ ಅಂಗನವಾಡಿ ಕಾರ್ಯಕರ್ತೆಯಾಗಿದ್ದ ಸೌಮ್ಯ ಎಂಬುವವರೇ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಪತಿ ಸಂತೋಷ್ ಪೂಜಾರಿ ಇತ್ತೀಚೆಗಷ್ಟೇ ಅನಾರೋಗ್ಯದಿಂದಾಗಿ ಸಾವನ್ನಪ್ಪಿದ್ದರು. ಇದರಿಂದಾಗಿ ಪತ್ನಿ ಮಾನಸಿಕವಾಗಿ ಕುಗ್ಗಿದ್ದರು.
ಆರ್ಥಿಕ ಸಂಕಷ್ಟದಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಂದೆ ಮತ್ತು ತಾಯಿಯ ಸಾವಿನಿಂದ 16 ಮತ್ತು 12 ವರ್ಷದ ಇಬ್ಬರು ಪುತ್ರಿಯರು ಅನಾಥರಾಗಿದ್ದಾರೆ. ಪುತ್ರಿಯರ ಆಕ್ರಂದನ ಸ್ಥಳದಲ್ಲಿ ಮುಗಿಲು ಮುಟ್ಟಿತ್ತು.








