ನಾನು- ನಾವು-ಪಕ್ಷ ಎಂಬ ಹಗ್ಗ-ಜಗ್ಗಾಟದ ಹೊರತಾಗಿ JDS ಭದ್ರಕೋಟೆ ಹಾಸನದಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ. ಈ ಜನ ಕಲ್ಯಾಣ ಸಮಾವೇಶದಲ್ಲಿ CM ಸಿದ್ದರಾಮಯ್ಯ, DCM ಡಿಕೆಶಿ, ಸಚಿವರು, ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ. ಆರಂಭದಲ್ಲಿ ಇದನ್ನು ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಎಂದೇ ಹೇಳಲಾಗಿತ್ತು. ಇದರಲ್ಲಿ ಸರ್ಕಾರ & ಪಕ್ಷದ ಯಾವ ಪಾತ್ರವೂ ಇಲ್ಲ ಎಂದು ಅವರ ಆಪ್ತರು ಘೋಷಿಸಿದ್ದರು ಕೂಡ, ಆದರೆ ಈ ನಡುವೆ ಮಧ್ಯಪ್ರವೇಶಿಸಿದ್ದ AICC ಈ ಸಮಾವೇಶವನ್ನು ಪಕ್ಷದ ಬ್ಯಾನರ್ ಅಡಿಯಲ್ಲೇ ನಡೆಸಬೇಕೆಂದು ಖಡಕ್ ಆಗಿ ಸೂಚಿಸಿತ್ತು.
ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ
ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...








