ಮಂಗಳೂರು: ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖರಾಗಲು ಅಭಿಮಾನಿಗಳು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಗೋಕರ್ಣನಾಥನಿಗೆ 109 ಎಳನೀರು ಅಭಿಷೇಕ ಮತ್ತು ಮಹಾಪೂಜೆ ನಡೆಸಿದ ಜನಾರ್ದನ ಪೂಜಾರಿ ಅಭಿಮಾನಿ ಬಳಗ, ಅವರು ಶೀಘ್ರ ಗುಣಮುಖರಾಗಲಿ ಎಂದು ದೇವರನ್ನು ಪ್ರಾರ್ಥಿಸಿದ್ದಾರೆ.
ಇತ್ತೀಚೆಗೆ ಜನಾರ್ದನ ಪೂಜಾರಿ ಮತ್ತು ಅವರ ಪತ್ನಿಗೆ ಪಾಸಿಟಿವ್ ಬಂದಿತ್ತು. ಮನೆ ಕೆಲಸದವರಿಂದ ಜನಾರ್ದನ ಪೂಜಾರಿಗೆ ಸೋಂಕು ಅವರಿಗೆ ಹರಡಿತ್ತು. ಈ ಹಿನ್ನೆಲೆಯಲ್ಲಿ ಪೂಜಾರಿ ಅವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ
ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...








