ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರವು ನಾಳೆ (ಬುಧವಾರ) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಘೋಷಣೆ ಮಾಡಿದ್ದಾರೆ.
ಅಂತಿಮ ದರ್ಶನದ ವ್ಯವಸ್ಥೆ:
ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರವನ್ನು ನಾಳೆ ಬೆಳಗ್ಗೆ 8 ಗಂಟೆಯವರೆಗೆ ಅಂತಿಮ ದರ್ಶನಕ್ಕಾಗಿ ಇಡಲಾಗುತ್ತದೆ.
ನಂತರ, ಅವರ ಹುಟ್ಟೂರಾದ ಸೋಮನಹಳ್ಳಿ (ಮಂಡ್ಯ ಜಿಲ್ಲೆ)ಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತದೆ.
ಅಲ್ಲಿ ಸಾರ್ವಜನಿಕರಿಗೆ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಅಂತಿಮ ನಮನ ಸಲ್ಲಿಸಲು ಅವಕಾಶ ನೀಡಲಾಗುವುದು.








