ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಎಸ್.ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಸದಾಶಿವ ನಗರದ ಎಸ್ಎಂ ಕೃಷ್ಣ (SM Krishna) ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಸೇರುವುದಕ್ಕೂ ಮುನ್ನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೆ. ನೀವು ಕಾಂಗ್ರೆಸ್ ಸೇರುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದಿದ್ದರು. ಸಜ್ಜನ ರಾಜಕಾರಣ, ಎಸ್ಎಂಕೆಯಂತಹ ಒಳ್ಳೆಯ ವಾಗ್ಮಿಯನ್ನು ಕಳೆದುಕೊಂಡಿದ್ದು ರಾಜಕೀಯ ಕ್ಷೇತ್ರಕ್ಕೆ ನಷ್ಟವಾಗಿದೆ. ಇಡೀ ವಿಶ್ವ ಇಂದು ಬೆಂಗಳೂರನ್ನು ನೋಡುತ್ತಿದೆ ಎಂದರೆ, ಅದಕ್ಕೆ ಇವರೇ ಕಾರಣ.
ಬೆಂಗಳೂರನ್ನು ಅಂತಾರಾಷ್ಟ್ರೀಯ ನಗರವಾಗಿ ಬೆಳೆಸಿದ ಕೀರ್ತಿ ಎಸ್.ಎಂ. ಕೃಷ್ಣ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.








