ತಿರುವನಂತಪುರಂ: ಶಬರಿಮಲೆಗೆ ಸಾಂಪ್ರದಾಯಿಕ ಕಾಡು ದಾರಿಯಲ್ಲಿ ಪಾದಯಾತ್ರೆಯಲ್ಲಿ ಆಗಮಿಸುವ ಭಕ್ತರಿಗೆ ಶೀಘ್ರದಲ್ಲೇ ವಿಶೇಷ ದರ್ಶನದ ವ್ಯವಸ್ಥೆ ಮಾಡಲಾಗುವುದು ಎಂದು ತಿರುವಾಂಕೂರ್ ದೇವಸ್ವಂ ಮಂಡಳಿಯ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ತಿಳಿಸಿದ್ದಾರೆ.ಅರಣ್ಯ ಇಲಾಖೆಯ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಪಾದಯಾತ್ರಿಗಳಿಗೆ ವಿಶೇಷ ಟ್ಯಾಗ್ಗಳನ್ನು ನೀಡಲಾಗುವುದು ಮತ್ತು ಈ ಟ್ಯಾಗ್ಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನೀಡುವರು ಎಂದು ಅವರು ತಿಳಿಸಿದ್ದಾರೆ.ಈ ಹೊಸ ವ್ಯವಸ್ಥೆಯಿಂದ ಪಾದಯಾತ್ರಿಗಳು ಸುಲಭವಾಗಿ ಸ್ವಾಮಿಯ ದರ್ಶನ ಪಡೆಯಲು ಸಾಧ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು
ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...








