ಬೆಂಗಳೂರು: ನಗರದ ಹೊರವಲಯದಲ್ಲಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಮನಸ್ಸೋ ಇಚ್ಛೆ ದಾಳಿ ನಡೆಸಿದ್ದಾರೆ. ಮಂಜುನಾಥ್ ಎಂಬ ವ್ಯಕ್ತಿಯ ದಾಳಿ ನಡೆದಿದೆ. ದಾಳಿಯಲ್ಲಿ ಕೈ ಕತ್ತರಿಸಿ, ಕಾಲು ದೇಹದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಈ ಘಟನೆ ಬೆಂಗಳೂರಿನ ದೇವನಹಳ್ಳಿಯ ವಿಶ್ವನಾಥಪುರದಲ್ಲಿ ನಡೆದಿದೆ. ಶ್ರೀರಾಮ್ ಎಂಬುವನೇ ದಾಳಿ ಮಾಡಿ ಪರಾರಿಯಾಗಿದ್ದಾನೆ. ಹಲ್ಲೆಗೊಳಗಾದ ಮಂಜುನಾಥ್, ಶ್ರೀರಾಮ್ ನ ಅತ್ತೆ ಮಗ. ತಂದೆ ಕೊಲೆ ಪ್ರಕರಣದಲ್ಲಿ ಸಹಾಯಕ್ಕೆ ಬಂದಿಲ್ಲವೆಂದು ಶ್ರೀರಾಮ್, ಮಂಜುನಾಥ್ ಮೇಲೆ ದ್ವೇಷ ಬೆಳೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ ನ ಕೈ ಕತ್ತರಿಸಿ, ಕಾಲು ದೇಹದ ಮೇಲೆ ಲಾಂಗ್ ಬೀಸಿ ಪರಾರಿಯಾಗಿದ್ದಾರೆ
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ
ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...








