ಬೆಂಗಳೂರು: ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ನಟ ಚರಿತ್ ಬಾಳಪ್ಪ (Charith Balappa) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕನ್ನಡದ ಮುದ್ದುಲಕ್ಷ್ಮಿ, ಲವಲವಿಕೆ, ಸರ್ಪಸಂಬಂಧ ಸೇರಿದಂತೆ ತೆಲುಗಿನ ಕೆಲವು ಧಾರಾವಾಹಿಗಳಲ್ಲಿ ಚರಿತ್ ನಟಿಸಿದ್ದಾರೆ. ಸದ್ಯ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚರಿತ್ ನನ್ನು ರಾಜರಾಜೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ ಹಾಗೂ ಹಲ್ಲೆ ಮಾಡಿರುವುದಾಗಿ ನಟನ ವಿರುದ್ಧ ಯುವತಿ ಆರೋಪಿಸಿದ್ದಾರೆ. ಪ್ರೀತಿಸುವ ನೆಪದಲ್ಲಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾನೆ. ಜೊತೆಗೆ ಯುವತಿ ವಾಸ ಮಾಡುತ್ತಿದ್ದ ಮನೆಗೆ ನುಗ್ಗಿ ಸಹಚರರ ಜೊತೆ ಕಿರುಕುಳ ನೀಡಿದ್ದಾನೆ. ಹಣಕ್ಕೂ ಬೇಡಿಕೆಯಿಟ್ಟಿದ್ದು, ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವೀಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪಿಸಿ, ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವನ್ನು ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದು ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಟೀಕಿಸಿರುವ...








