ಕಲಬುರಗಿ: ʻತಾಯಿ ನಮ್ಮ ಅತ್ತೆ ಬೇಗ ಸಾಯಬೇಕುʼ ಎಂದು ಮಹಿಳೆಯೊಬ್ಬರು ನೋಟಿನ ಮೇಲೆ ಬರೆದು ದೇವಿಯ ಹುಂಡಿಗೆ ಹಾಕಿರುವ ಘಟನೆ ನಡೆದಿದೆ.
ಕಲಬುರಗಿ (Kalaburagi) ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅಫಜಲಪುರದ ಸುಕ್ಷೇತ್ರ ಘತ್ತರ್ಗಿ ಭಾಗ್ಯವಂತಿ ದೇವಸ್ಥಾನದ ಹುಂಡಿಯಲ್ಲಿ ಈ ನೋಟ್ (currency) ಪತ್ತೆಯಾಗಿದ್ದು, ಕಳೆದ ಕೆಲ ತಿಂಗಳ ಹಿಂದೆ ದೇವಸ್ಥಾನಕ್ಕೆ ಭೇಟಿ ಕೊಟ್ಟ ಮಹಿಳೆ 20 ರೂ. ನೋಟಿನ ಮೇಲೆ ಅತ್ತೆ ಸಾಯಲೆಂದು ಬರಹ ಬರೆದು ಭಾಗ್ಯವಂತಿ ದೇವಿಯ ಹುಂಡಿಗೆ ಹರಕೆ ಹೊತ್ತಿದ್ದಾರೆ.
ಭಾಗ್ಯವಂತಿ ದೇವಿಯ ಹುಂಡಿ ಎಣಿಕೆ ಮಾಡುವ ವೇಳೆ ಅತ್ತೆ ಸಾಯಲೆಂದು ಹರಕೆ ಹೊತ್ತು ಕಾಣಿಕೆ ಅರ್ಪಿಸಿರುವ ನೋಟ್ ಪತ್ತೆಯಾಗಿದೆ. ಸದ್ಯ ಈ ಬರಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಲ್ಲೇಶ್ವರಂ ಫುಟ್ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ
ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...








