ಕಲಬುರಗಿ: ʻತಾಯಿ ನಮ್ಮ ಅತ್ತೆ ಬೇಗ ಸಾಯಬೇಕುʼ ಎಂದು ಮಹಿಳೆಯೊಬ್ಬರು ನೋಟಿನ ಮೇಲೆ ಬರೆದು ದೇವಿಯ ಹುಂಡಿಗೆ ಹಾಕಿರುವ ಘಟನೆ ನಡೆದಿದೆ.
ಕಲಬುರಗಿ (Kalaburagi) ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅಫಜಲಪುರದ ಸುಕ್ಷೇತ್ರ ಘತ್ತರ್ಗಿ ಭಾಗ್ಯವಂತಿ ದೇವಸ್ಥಾನದ ಹುಂಡಿಯಲ್ಲಿ ಈ ನೋಟ್ (currency) ಪತ್ತೆಯಾಗಿದ್ದು, ಕಳೆದ ಕೆಲ ತಿಂಗಳ ಹಿಂದೆ ದೇವಸ್ಥಾನಕ್ಕೆ ಭೇಟಿ ಕೊಟ್ಟ ಮಹಿಳೆ 20 ರೂ. ನೋಟಿನ ಮೇಲೆ ಅತ್ತೆ ಸಾಯಲೆಂದು ಬರಹ ಬರೆದು ಭಾಗ್ಯವಂತಿ ದೇವಿಯ ಹುಂಡಿಗೆ ಹರಕೆ ಹೊತ್ತಿದ್ದಾರೆ.
ಭಾಗ್ಯವಂತಿ ದೇವಿಯ ಹುಂಡಿ ಎಣಿಕೆ ಮಾಡುವ ವೇಳೆ ಅತ್ತೆ ಸಾಯಲೆಂದು ಹರಕೆ ಹೊತ್ತು ಕಾಣಿಕೆ ಅರ್ಪಿಸಿರುವ ನೋಟ್ ಪತ್ತೆಯಾಗಿದೆ. ಸದ್ಯ ಈ ಬರಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವಾಕಾಂಕ್ಷಿ ಶಾಸಕರು ಹಾಗೂ ಹಾಲಿ ಸಚಿವರು ದೆಹಲಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್...








