ನವದೆಹಲಿ: ಅಭಿವೃದ್ಧಿಯ ಹರಿಕಾರ, ಆರ್ಥಿಕತೆಯ ವಾಸ್ತುಶಿಲ್ಪಿ, ರಾಜಕಾರಣಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (Manmohan Singh) ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ನಿವಾಸದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಗುರುವಾರ ಇಹಲೋಕ ತ್ಯಜಿಸಿದ್ದಾರೆ. ರಾತ್ರಿ 9:51ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಅಂತ ಏಮ್ಸ್ ಆಸ್ಪತ್ರೆ ತಿಳಿಸಿದೆ. ಪತ್ನಿ ಗುರ್ಶನ್ ಕೌರ್, ಮೂವರು ಪುತ್ರಿಯರನ್ನು ಸಿಂಗ್ ಅಗಲಿದ್ದಾರೆ. ಅಮೆರಿಕದಲ್ಲಿರುವ ಪುತ್ರಿ ಆಗಮನಕ್ಕಾಗಿ ಕಾಯಲಾಗುತ್ತಿದೆ.
ಹೀಗಾಗಿ ಶನಿವಾರ ಬೆಳಗ್ಗೆ 8ಕ್ಕೆ ದೆಹಲಿ ಎಐಸಿಸಿ ಕಚೇರಿಗೆ ಪಾರ್ಥಿವ ಶರೀರವನ್ನ ರವಾನೆ ಮಾಡಿ ಬೆಳಗ್ಗೆ 9:30ರ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 9:30ರ ಬಳಿಕ ಅಂತಿಮ ಯಾತ್ರೆ ಆರಂಭವಾಗಲಿದ್ದು, ಸುಮಾರು 11:45ಕ್ಕೆ ನಿಗಮ್ಬೋಧ್ ಘಾಟ್ನಲ್ಲಿ ಸರ್ಕಾರಿ ಮತ್ತು ಸೇನಾಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.
ಸೇನಾಗೌರವಗಳಿಗೆ ಸೇನಾ ಇಲಾಖೆ ಕೂಡ ಸನ್ನದ್ಧವಾಗಿದೆ. 7 ದಿನ ದೇಶಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಗಣ್ಯ ವ್ಯಕ್ತಿಗಳು ಸೇರಿದಂತೆ ದೇಶದ ಜನರು ಕಂಬನಿ ಮಿಡಿಯುತ್ತಿದ್ದಾರೆ
ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು
ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...








