ಕಾರವಾರ: ಕ್ರಿಸ್ಮಸ್ (Christmas) ಸೇರಿದಂತೆ ಸಾಲು ಸಾಲು ರಜೆ (Holiday)ಗಳು ಬರುತ್ತಿವೆ. ಹೀಗಾಗಿ ಪ್ರವಾಸಿಗರು (Tourist) ಮುರುಡೇಶ್ವರಕ್ಕೆ (Murudeshwar) ಬರುತ್ತಿದ್ದು, ಸಮುದ್ರ ಭಾಗದಲ್ಲಿ ಜಲಸಾಹಸ ಕ್ರೀಡೆಗಳು ಬಂದ್ ಆಗಿರುವುದರಿಂದ ನಿರಾಸೆಯಿಂದ ಮರಳುತ್ತಿದ್ದಾರೆ.
ಲೈಫ್ ಗಾರ್ಡ್, ಭದ್ರತೆ ವ್ಯವಸ್ಥೆ ಕಲ್ಪಿಸಿ ತಕ್ಷಣ ಪ್ರವಾಸಿಗರಿಗೆ ಕಡಲ ತೀರ ಭಾಗಕ್ಕೆ ಪ್ರವೇಶ ನೀಡಬೇಕು ಎಂದು ಪ್ರವಾಸೋದ್ಯಮ ನಂಬಿದ ಸ್ಥಳೀಯ ಉದ್ಯಮಿಗಳು ಜಿಲ್ಲಾಡಳಿತಕ್ಕೆ ಮನವಿ ಸಹ ನೀಡಿದ್ದರು. ಶೀಘ್ರದಲ್ಲೇ ಮುರುಡೇಶ್ವರ ಕಡಲ ತೀರದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿ ಅವಕಾಶ ಮಾಡಿಕೊಡುವುದಾಗಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಮಾಹಿತಿ ನೀಡಿದ್ದಾರೆ.
ಮುರುಡೇಶ್ವರದಲ್ಲಿ ಪ್ರವಾಸಿಗರ ರಕ್ಷಣೆಗಾಗಿ ಲೈಫ್ ಗಾರ್ಡ್ಗಳನ್ನು ನೇಮಿಸಲಾಗಿದೆ. ಎಸಿ ನೇತೃತ್ವದ ಸಮಿತಿ ಸಹ ಜಾರಿಗೆ ತರಲಾಗಿದೆ. ಬುಧವಾರದಂದು ಕಡಲ ತೀರ ಭಾಗದಲ್ಲಿ ಸುರಕ್ಷಿತ ಮತ್ತು ಅಪಾಯಕಾರಿ ವಲಯವನ್ನು ಗುರುತಿಸಿ ರೋಪ್ ಅಳವಡಿಸಲಾಗುತ್ತಿದೆ. ಹೀಗಾಗಿ ಜನರಿಗೆ ಕಡಲ ತೀರದಲ್ಲಿ ಇಳಿಯಲು ಅವಕಾಶ ನೀಡುತ್ತಿಲ್ಲ. ಹೀಗಾಗಿ ಪ್ರವಾಸಿಗರು ಬೇಸರದಿಂದ ಹೊರ ಹೋಗುತ್ತಿದ್ದಾರೆ..
ಅಜ್ಜಯ್ಯನ ಶಕ್ತಿಯಿಂದಲೇ ಸರ್ಕಾರ ಸುಭದ್ರ, ಮುಂದೇನಾಗುತ್ತೆ ಅನ್ನೋದನ್ನ ಕಾದು ನೋಡಿ: ಡಿಕೆ ಶಿವಕುಮಾರ್
ತುಮಕೂರು: ರಾಜ್ಯ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ತಮ್ಮ ಅಚಲ ದೈವಭಕ್ತಿಯನ್ನು ಪ್ರದರ್ಶಿಸಿದ್ದು, ರಾಜ್ಯ ಸರ್ಕಾರದ ಅಸ್ತಿತ್ವ ಮತ್ತು ಭವಿಷ್ಯದ ಕುರಿತು...








