ಚಿಕ್ಕಬಳ್ಳಾಪುರ: ಆರ ಟಿಒ ಕಚೇರಿಯ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ನಡೆದಿದೆ.
ನಗರದ ಚಿತ್ರಾವತಿ ಬಳಿಯ ಆರ್ಟಿಒ ಕಚೇರಿಯ (Chikkaballapur RTO office)ಲ್ಲಿ ಈ ಘಟನೆ ನಡೆದಿದೆ.
ಒಳ ನುಗ್ಗಿರುವ ಖದೀಮರು ಕಚೇರಿಯಲ್ಲಿರುವ ಮೂರು ಕಂಪ್ಯೂಟರ್ (Computer) ಸಿಪಿಐ ಹಾಗೂ ಮಾನಿಟರ್ ಗಳನ್ನು ಕದ್ದು ಪರಾರಿಯಾಗಿದ್ದಾರೆ. ಮಧ್ಯರಾತ್ರಿ ವೇಳೆ ಕಚೇರಿ ಹಿಂಬಾಗಿಲಿನಿಂದ ನುಗ್ಗಿರುವ ಖದೀಮರು ಕಚೇರಿಯ ಬೀಗ ಕಟ್ ಮುರಿದು, ಕಂಪ್ಯೂಟರ್ ಗಳನ್ನು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.
ಕಚೇರಿಯಲ್ಲಿ ಇಬ್ಬರು ಹೊಂ ಗಾರ್ಡ್ಗಳನ್ನ ಭದ್ರತೆಗೆ ನಿಯೋಜನೆ ಮಾಡಿದ್ರೂ ಹೋಂ ಗಾರ್ಡ್ಗಳು ನಿದ್ದೆಗೆ ಜಾರಿದ್ದಾರೆ. ಇದನ್ನು ಗಮನಿಸಿದ ಖದೀಮರು ಒಳ ನುಗ್ಗಿ ದೋಚಿ ಪರಾರಿಯಾಗಿದ್ದಾರೆ. ವಿಷಯ ತಿಳಿದು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖದೀಮರು ಮುಸುಕು ವೇಷ ತೊಟ್ಟು ಒಳ ನುಗ್ಗಿದ್ದರು ಎಂದು ತಿಳಿದು ಬಂದಿದೆ.
ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ
ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....








