ತಿರುವನಂತಪುರಂ: ಎನ್ಸಿಸಿಯ ತರಬೇತಿ ಶಿಬಿರದಲ್ಲಿ 80ಕ್ಕೂ ಅಧಿಕ ಕೆಡೆಟ್ ಗಳು ವಿಷಾಹಾರ ಸೇವಿಸಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಕೇರಳದ ತರಬೇತಿ ಶಿಬಿರದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಿರಿಯ ಸೇನಾಧಿಕಾರಿ ಮೇಲೆ ಹಲ್ಲೆ ನಡೆಸಿರುವ ವೀಡಿಯೋ ವೈರಲ್ ಆಗಿದೆ. ಸದ್ಯ ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಕೌನ್ಸಿಲರ್ ಮತ್ತು ಎಡಪಕ್ಷದ ನಾಯಕ ಸೇರಿಕೊಂಡು ಸೇನಾಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
80 ಕ್ಕೂ ಹೆಚ್ಚು ಕೆಡೆಟ್ಗಳು ಕೆಎಂಎಂ ಕಾಲೇಜಿನಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದರು. ಘಟನೆ ಬೆನ್ನಲ್ಲೇ, ಇಬ್ಬರು ವ್ಯಕ್ತಿಗಳು ಇತರರೊಂದಿಗೆ ಆವರಣಕ್ಕೆ ನುಗ್ಗಿ ಎನ್ಸಿಸಿ ಬೆಟಾಲಿಯನ್ನ ಲೆಫ್ಟಿನೆಂಟ್ ಕರ್ನಲ್ ಕರ್ನೈಲ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ.
ಸಿಬಿಎಸ್ಇ 12ನೇ ತರಗತಿ ಫಲಿತಾಂಶ 2026: ವೆಬ್ಸೈಟ್, ಡಿಜಿಲಾಕರ್ ಮತ್ತು ಉಮಾಂಗ್ ಆ್ಯಪ್ ಮೂಲಕ ರಿಸಲ್ಟ್ ನೋಡುವುದು ಹೇಗೆ?
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು 2026ನೇ ಸಾಲಿನ 12ನೇ ತರಗತಿ ಫಲಿತಾಂಶಗಳನ್ನು ಬಿಡುಗಡೆ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಲಕ್ಷಾಂತರ ವಿದ್ಯಾರ್ಥಿಗಳ ಎದಬಡಿತ ಹೆಚ್ಚಾಗಿದ್ದು, ಫಲಿತಾಂಶದ ಕ್ಷಣಗಣನೆ...








