ದಾವಣಗೆರೆ: ಹೊಸ ವರ್ಷದ ಸಂಭ್ರಮದಲ್ಲೇ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ನಗರದ ನೂತನ್ ಕಾಲೇಜ್ ಮುಂದೆ ಮಧ್ಯರಾತ್ರಿ 1 ಗಂಟೆಯ ವೇಳೆ ನಡೆದಿದೆ. ಅಪಘಾತದಲ್ಲಿ ಯುವಕ ಬಲಿಯಾಗಿದ್ದು, ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ನಿಟ್ಟುವಳ್ಳಿ ಹೊಸ ಬಡಾವಣೆಯ ಕಾರ್ತಿಕ್ (19) ಸಾವನ್ನಪ್ಪಿರುವ ಯುವಕ ಎಂದು ಗುರುತಿಸಲಾಗಿದೆ.
ಹೊಸ ವರ್ಷ ಸಂಭ್ರಮಾಚರಣೆಗೆ ಸ್ನೇಹಿತರ ಜೊತೆ ಯುವಕ ತೆರಳುತ್ತಿದ್ದ. ಬೈಕ್ ನಲ್ಲಿ ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾನೆ. ಗಂಭೀರ ಗಾಯಗೊಂಡಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕರುನಾಡಿನ ರಾಜರತ್ನ ಪುನೀತ್ ರಾಜ್ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ
ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ...








