ನವದೆಹಲಿ: ರಾಷ್ಟ್ರ ರಾಜಧಾನಿಗೆ ಫೆ.5 ರಂದು ಚುನಾವಣೆ (Delhi Election) ನಡೆಯಲಿದ್ದು, ಫೆ. 8ಕ್ಕೆ ಮತ ಎಣಿಕೆ ನಡೆಯಲಿದೆ.
ದೆಹಲಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಕುರಿತು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Rajiv kumar) ಅವರು ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಪ್ರಕಟಿಸಿದರು.
70 ಸದಸ್ಯರ ಬಲದ ದೆಹಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಯಬೇಕಿದೆ. ಎಎಪಿ (AAP) ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅರವಿಂದ್ ಕೇಜ್ರಿವಾಲ್ ಚುನಾವಣೆ ಗೆದ್ದು ಮತ್ತೆ ಸಿಎಂ ಹುದ್ದೆಗೇರುವ ತವಕದಲ್ಲಿದ್ದಾರೆ. ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ನವದೆಹಲಿ ಕ್ಷೇತ್ರದಿಂದ ಹಾಗೂ ಹಾಲಿ ಸಿಎಂ ಅತಿಶಿ ಕಲ್ಕಾಜಿ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ.
ಈಗಾಗಲೇ ದೆಹಲಿಯ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ (BJP) 29 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎಎಪಿ ತೊರೆದು ಬಿಜೆಪಿ ಸೇರಿದ್ದ ಕೈಲಾಶ್ ಗೆಹ್ಲೋಟ್ ಬಿಜವಸನ್ನಿಂದ ಸ್ಪರ್ಧಿಸುತ್ತಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಕೂಡ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, 48 ಅಭ್ಯರ್ಥಿಗಳನ್ನು ಘೋಷಿಸಿದೆ. ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಮಗ ಸಂದೀಪ್ ದೀಕ್ಷಿತ್ ಈ ಬಾರಿ ವಿಧಾನಸಭಾ ಚುನಾವಣೆಗೆ ಇಳಿಯಲಿದ್ದಾರೆ. ಈ ಹಿಂದೆ ಎರಡು ಬಾರಿ ಸಂಸದರಾಗಿದ್ದ ದೀಕ್ಷಿತ್ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿಯಲಿದ್ದಾರೆ.
2013 ಮತ್ತ 2015ರಲ್ಲಿ ಕೇಜ್ರಿವಾಲ್ ಶೀಲಾ ದೀಕ್ಷಿತ್ ವಿರುದ್ದ ಗೆಲುವು ಸಾಧಿಸಿದ್ದರು. ಹೀಗಾಗಿ ಬಿಜೆಪಿ ಹಾಗೂ ಆಪ್ ಮಧ್ಯೆ ಟೀಕಾ ಪ್ರಹಾರ ನಡೆಯುತ್ತಿದೆ. ಬಿಜೆಪಿಯು 1998 ರಿಂದ ದೆಹಲಿಯಲ್ಲಿ ಅಧಿಕಾರದಿಂದ ಹೊರಗುಳಿದಿದ್ದು, 2015 ರಿಂದ ವಿಧಾನಸಭಾ ಚುನಾವಣೆಯಲ್ಲಿ ಪ್ರಾಬಲ್ಯ ಹೊಂದಿರುವ ಎಎಪಿಯನ್ನು ಸೋಲಿಸಲು ಎಲ್ಲ ಮಾಡುತ್ತಿದೆ.
8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ
ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...








