ಬೆಂಗಳೂರು: ಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ಜೋರಾಗಿದೆ. ಈ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ದೇವರ ಮೊರೆ ಹೋಗಿದ್ದಾರೆ.
ತಮಿಳುನಾಡಿನ (Tamil Nadu) ಕುಂಬಕೋಣಂಗೆ ಭೇಟಿ ನೀಡಿದ್ದ ಡಿಕೆಶಿ, ಪ್ರತ್ಯಂಗಿರಾ ದೇವಿ (Pratyangira Devi) ದರ್ಶನ ಮಾಡಿದ್ದಾರೆ. ಈ ವೇಳೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬ್ರಹ್ಮಾಂಡ ರಕ್ಷಿಸುವುದಕ್ಕಾಗಿ ʻಪ್ರತ್ಯಂಗಿರಾ ದೇವಿʼ ಅವತಾರ ಎತ್ತಿದ್ದಾರೆ. ಪ್ರತ್ಯಂಗಿರಾ ದೇವಿಯು ಶಕ್ತಿ ದೇವತೆಗಳಲ್ಲಿ ಉಗ್ರ ಸ್ವರೂಪಿಣಿ, ಶತ್ರು ಸಂಹಾರಕ್ಕಾಗಿ ಜನಿಸಿ ಬಂದವಳು. ರಕ್ಷಣೆಗಾಗಿ ಪ್ರತಿಯೊಬ್ಬರು ದೇವಿಯ ದರ್ಶನ ಪಡೆಯುತ್ತಾರೆ. ಈಗ ಡಿಕೆಶಿ ದರ್ಶನ ಪಡೆದಿರುವುದಕ್ಕೆ ಕೂಡ ಹಲವಾರು ಅನುಮಾನಗಳು ವ್ಯಕ್ತವಾಗುತ್ತಿವೆ. ಹಲವರು ಹಲವು ರೀತಿಯಲ್ಲಿ ವ್ಯಾಖ್ಯಾನಿಸುತ್ತಿದ್ದಾರೆ.
ಗೃಹ ಸಚಿವ ಪರಮೇಶ್ವರ್ ಆಯೋಜಿಸಿದ್ದ ಡಿನ್ನರ್ ಸಭೆಗೆ ಬ್ರೇಕ್ ಹಾಕಿದ ನಂತರ ಕಾಂಗ್ರೆಸ್ ಭಿನ್ನಮತ ತಾರಕಕ್ಕೆ ಏರಿದೆ. ಡಿನ್ನರ್ ಪಾಲಿಟಿಕ್ಸ್ ಮಾಡಿದ್ದ ಸಿಎಂ ಬಣಕ್ಕೆ, ವಿದೇಶದಿಂದ ಮರಳಿ ಬರುತ್ತಿದ್ದಂತೆ ತಾಳ್ಮೆಯಿಂದಲೇ ಉತ್ತರ ನೀಡಿದ್ದಾರೆ
ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...








