ರಾಯಚೂರು: ನಟ ಸೈಫ್ ಅಲಿ ಖಾನ್ (Saif Ali Khan) ಮೇಲೆ ಖದೀಮನೊಬ್ಬ ಹಲ್ಲೆ ನಡೆಸಿದ್ದಾನೆ. ಈ ವಿಚಾರವಾಗಿ ಮಾತನಾಡಿರುವ ನಟಿ ಶಿಲ್ಪಾ ಶೆಟ್ಟಿ, ನನಗೆ ಆ ಘಟನೆ ಕೇಳಿ ಶಾಕ್ ಆಗಿದೆ. ಬೇಗ ಗುಣಮುಖರಾಗುತ್ತಾರೆ ಎಂಬ ನಂಬಿಕೆ ನನಗೆ ಇದೆ ಎಂದಿದ್ದಾರೆ.
ರಾಯಚೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಮುಂಬೈ ಪೊಲೀಸರು (Mumbai Police) ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಮಾಡಿದವನನ್ನ ಕೂಡಲೇ ಬಂಧಿಸಲಿದ್ದಾರೆ. ರಾಯಚೂರಿಗೆ ಬಂದಿರುವುದು ನಾನು ನಮ್ಮ ಊರಿಗೆ ಬಂದಂತೆ ಆಗಿದೆ. ನನ್ನ ಕನ್ನಡದ ಮುಂದಿನ ಸಿನಿಮಾ ಡೆವಿಲ್ ಹಾಗೂ ಕೆಡಿ ಬರುತ್ತಿವೆ. ಪ್ರೇಮ್ ನಿರ್ದೇಶನದ ಕೆಡಿ ಸಿನಿಮಾ ಬಗ್ಗೆ ನನಗೆ ಭಾರೀ ಕುತೂಹಲ ಇದೆ ಎಂದಿದ್ದಾರೆ.








