ದಾವಣಗೆರೆ: ಸ್ನೇಹಿತರ ಹೆಸರಿನಲ್ಲಿ ನಕಲಿ ಚಿನ್ನ ಅಡವಿಟ್ಟು ಬರೋಬ್ಬರಿ 49 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ.
ಈ ಘಟನೆ ಜಗಳೂರಿನಲ್ಲಿ (Jagalur) ನಡೆದಿದೆ. ಜಗಳೂರು ಪಟ್ಟಣದಲ್ಲಿರುವ ಕೆಎಲ್ಎಂ ಆಕ್ಸಿವಾ ಫಿನ್ ವೆಸ್ಟ್ ಬ್ಯಾಂಕ್ ನಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಂಕ್ನ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಅರವಿಂದ್ ರೆಡ್ಡಿ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಈತ 9 ಜನ ಸ್ನೇಹಿತರ ಹೆಸರಿನಲ್ಲಿ 84.5 ತೊಲ ನಕಲಿ ಬಂಗಾರ ಅಡವಿಟ್ಟು, ಬರೋಬ್ಬರಿ 49 ಲಕ್ಷ ರೂ.ಗೂ ಹೆಚ್ಚಿನ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡು ನಾಪತ್ತೆಯಾಗಿದ್ದಾನೆ.
ಆದರೆ, ಸ್ನೇಹಿತರಿಗೆ ಬ್ಯಾಂಕ್ ನಿಂದ ಬಡ್ಡಿ ಹಣ ಕಟ್ಟುವಂತೆ ನೋಟಿಸ್ ಬಂದಾಗ ಈ ಪ್ರಕರಣ ಬಯಲಿಗೆ ಬಂದಿದೆ. ತಾವು ಯಾವುದೇ ಬಂಗಾರ ಅಡವಿಟ್ಟಿಲ್ಲ ಎಂದು ಬ್ಯಾಂಕ್ಗೆ 9 ಜನ ಸ್ನೇಹಿತರು ತೆರಳಿದ್ದಾರೆ. ಆಗ ಈ ವಿಚಾರ ಬೆಳಕಿಗೆ ಬಂದಿದ್ದು, ಬ್ಯಾಂಕ್ನ ಸಹಾಯಕ ವ್ಯವಸ್ಥಾಪಕ ವಸಂತ್ ಕುಮಾರ್ ದೂರು ನೀಡಿದ್ದಾರೆ.








