ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರೀತಿಯ ಹುಡುಗರಿಗೆ ಚುಚ್ಚಿದ ಕೆಂಪು ಗುಲಾಬಿಯ ಮುಳ್ಳು..!

The Thorn That Pricked the Lovers of the Red Rose..!

Shwetha by Shwetha
May 30, 2025
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಪ್ರೀತಿಯ ಹುಡುಗರಿಗೆ ಚುಚ್ಚಿದ ಕೆಂಪು ಗುಲಾಬಿಯ ಮುಳ್ಳು..!

ಒಮ್ಮೊಮ್ಮೆ ಹೀಗೂ ಆಗುವುದು… 2025ರ ಐಪಿಎಲ್‍ನ ಕ್ವಾಲಿಫೈಯರ್ ಪಂದ್ಯದಲ್ಲಿ ಆಗಿದ್ದು ಅದೇ… ಕೆಂಪು ಗುಲಾಬಿಯನ್ನು ಕೀಳಲು ಹೋದ ಪ್ರೀತಿಯ ಹುಡುಗರಿಗೆ ಮುಳ್ಳು ಚುಚ್ಚಿದ್ದು ಗೊತ್ತೇ ಆಗಲಿಲ್ಲ. ಗೊತ್ತಾದಾಗ ಡಿಂಪಲ್ ರಾಣಿಯ ಹುಡುಗರ ಮನಸ್ಸು ಕೈ ಜಾರಿ ಹೋಗಿದೆ. ಐಪಿಎಲ್‍ನಲ್ಲಿ ಭಗ್ನ ಪ್ರೇಮದ ವೇದನೆಯಲ್ಲಿರುವ ಬೆಂಗಳೂರು ಹುಡುಗರ ಭಾಗ್ಯದ ಬಾಗಿಲು ತೆರೆದಂತಿದೆ.

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಹೌದು, ಆರ್ ಸಿಬಿ ಅಂದ್ರೆ ಸೂಜಿಗಲ್ಲಿನಂತೆ ಸೆಳೆಯುವ ಅಯಸ್ಕಾಂತ… ಸೋತರೆ ಕಣ್ಣೀರು. ಗೆದ್ದರೆ ಪರಮಾನಂದ…
ಕಪ್ ಗೆಲ್ಲದಿದ್ರೂ ಚಿಂತೆ ಇಲ್ಲ. ಯಾಕಂದ್ರೆ ಅದು ಎಂದೆಂದಿಗೂ ಮುಗಿಯದ ಅಮರ ಪ್ರೇಮ. ಒಂದು ರೀತಿಯಲ್ಲಿ ಮೋಹದ ಬಲೆಯೊಳಗೆ ಬಿದ್ದ ಪ್ರೀತಿಯ ಹಾಗೇ.

ಆರ್ ಸಿಬಿ ಅಭಿಮಾನಿಗಳ ಪ್ರೀತಿಯ ಅಭಿಮಾನ, ತಾಳ್ಮೆ, ಸಂಯಮಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಪ್ರತಿಷ್ಠೆ, ಆತ್ಮಾಭಿಮಾನಕ್ಕೆ ದಕ್ಕೆಯಾದ್ರೂ ಡೋಂಟ್‍ಕೇರ್.. ಎಷ್ಟೇ ಟೀಕೆ, ಹೀಯಾಳಿಸಿದ್ರೂ ಪರವಾಗಿಲ್ಲ. ಒಂದಲ್ಲ ಒಂದು ದಿನ ಗೆದ್ದೇ ಗೆಲ್ತೀವಿ ಅನ್ನೋ ಬಲವಾದ ನಂಬಿಕೆ ರೆಡ್ ಆರ್ಮಿಯಲ್ಲಿದೆ. ಪ್ರತಿ ಸಲ ಈ ಬಾರಿ ಕಪ್ ನಮ್ದೆ ಅಂತ ಹೆಮ್ಮೆಯಿಂದ ಹೇಳಿಕೊಂಡು ಬರುತ್ತಿರುವ ಆರ್ ಸಿಬಿ ಅಭಿಮಾನಿಗಳು ಶ್ರೀರಾಮನನ್ನು ಕಾದ ಶಬರಿಯಂತೆ ಆ ಒಂದು ದಿನವನ್ನು ಕಾಯುತ್ತಿದ್ದಾರೆ.

ಆರ್ ಸಿಬಿ ಒಂದೇ ಒಂದು ಬಾರಿ ಕಪ್ ಗೆಲ್ಲಬೇಕು. ಆ ಕ್ಷಣವನ್ನು ಕಣ್ತುಂಬಿಕೊಳ್ಳಬೇಕು ಎಂದು ಕೋಟಿ ಕೋಟಿ ಕಣ್ಣುಗಳು ಕಾಯುತ್ತಿವೆ. ಈ ಹಿಂದೆ ಮೂರು ಬಾರಿ ಕಣ್ಣ ಮುಂದೆ ರಪ್ಪನೆ ಹಾದು ಹೋದ್ರೂ ಅದನ್ನು ಕೈವಶ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಇದೀಗ ನಾಲ್ಕನೇ ಬಾರಿ ಕಣ್ಣ ಮುಂದೆಯೇ ಐಪಿಎಲ್ ಟ್ರೋಫಿ ಬಿಡಿ ವಜ್ರದಂತೆ ಹೊಳೆಯುತ್ತಿದೆ.

ಕಳೆದ 17 ವರ್ಷಗಳಿಂದ ಆರ್ ಸಿಬಿ ಅಭಿಮಾನಿಗಳು ಆರ್ ಸಿಬಿ ಆಟಗಾರರನ್ನು ರೇಗಾಡಿಕೊಂಡು, ಕೊಂಡಾಡಿಕೊಂಡು, ಆರಾಧಿಸಿಕೊಂಡು, ಹೃದಯದಲ್ಲಿ ಪ್ರೀತಿಯನ್ನು ಬಚ್ಚಿಟ್ಟುಕೊಂಡು ಬಂದಿದ್ದಾರೆ. ಇದೀಗ ಆ ಪ್ರೀತಿಗೆ ಕಾಣಿಕೆಯನ್ನು ಸಮರ್ಪಿಸಲು ಆರ್ ಸಿಬಿ ಹುಡುಗರು ಒಂದೇ ಒಂದು ಹೆಜ್ಜೆ ದೂರದಲ್ಲಿದ್ದಾರೆ. ಒಂದು ವೇಳೆ, ಆರ್ ಸಿಬಿ ಹುಡುಗರು ಕಟ್ಟಕಡೆಯ ಹೆಜ್ಜೆಯಲ್ಲಿ ಗೆಜ್ಜೆಯಂತೆ ಸದ್ದು ಮಾಡಿದ್ರೆ ಇಡೀ ಕ್ರಿಕೆಟ್ ಜಗತ್ತು ಮತ್ತೊಂದು ಮಹಾ ಸಂಭ್ರಮಕ್ಕೆ ಸಾಕ್ಷಿಯಾಗುವುದರಲ್ಲಿ ಅಚ್ಚರಿ ಏನಿಲ್ಲ.

ಆರ್ ಸಿಬಿ ಯಾಕೆ ಕಪ್ ಗೆಲ್ಲಬೇಕು..?
ಆರ್ ಸಿಬಿಯ ಮೊದಲ ಮಾಲೀಕ ವಿಜಯ್ ಮಲ್ಯ ಒಡೆತನದಲ್ಲಿ ತಂಡ ಇರುತ್ತಿದ್ರೆ ಅದರ ಖದರೇ ಬೇರೆ ರೀತಿಯಲ್ಲಿರುತ್ತಿತ್ತು. ಯಾಕಂದ್ರೆ ಆರ್ ಸಿಬಿ ಅಂದ್ರೆ ಅದು ಕನ್ನಡದ ಆಸ್ಮಿತೆ. ಆರ್ ಸಿಬಿ ಅಂದ್ರೆ ಬೆಂಗಳೂರಿನ ಘನತೆ. ಆರ್‍ಸಿಬಿ ಅಂದ್ರೆ ಅದು ಕನ್ನಡಿಗರ ತಂಡ. ಅದರಲ್ಲೂ ಮಲ್ಯ ಒಡೆತನದಲ್ಲಿದ್ದಾಗ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ಇರುತ್ತಿತ್ತು. ಆದಾದ ನಂತರ ಕನ್ನಡಿಗ ಆಟಗಾರರನ್ನು ಕಡಗಣನೆ ಮಾಡಿದ್ರೂ, ಏನೋ ಒಂದು ಸೆಳೆತÀವಿರುತ್ತಿತ್ತು. ಆರ್ ಸಿಬಿ ಮೇಲಿನ ಅಭಿಮಾನ ಜಾಸ್ತಿಯಾಗಿದ್ದೇ ಹೊರತು, ಯಾವತ್ತೂ ಕಮ್ಮಿಯಾಗಿಲ್ಲ. ಅದಕ್ಕೆ ಕಾರಣ ವಿರಾಟ್ ಕೊಹ್ಲಿ ಎಂಬ ಫೈಯರ್ ಬ್ರ್ಯಾಂಡ್.

ಹೌದು, ಯಾರು ಏನು ಅನ್ನಲಿ, ಇವತ್ತು ವಿರಾಟ್ ಕೊಹ್ಲಿ ಅಂದ್ರೆ ಆರ್ ಸಿಬಿ… ಆರ್ ಸಿಬಿ ಅಂದ್ರೆ ವಿರಾಟ್ ಕೊಹ್ಲಿ. ಅದಕ್ಕೂ ಮುಖ್ಯ ಕಾರಣ ವಿಜಯ್ ಮಲ್ಯ. ಆಗಷ್ಟೇ 19 ವಯೋಮಿತಿ ವಿಶ್ವಕಪ್ ಗೆದ್ದ ಭಾರತ ತಂಡದ ನಾಯಕ ತನ್ನ ತಂಡದಲ್ಲಿರಲೇಬೇಕು ಎಂದು ಹಠಕ್ಕೆ ಬಿದ್ದು ಖರೀದಿ ಮಾಡಿದ್ದು ವಿಜಯ್ ಮಲ್ಯ. ಬಳಿಕ ಐಪಿಎಲ್ ಎಂಬ ಮೋಹದ ಬಲೆಯೊಳಗೆ ಸಿಲುಕಿದ್ದ ವಿರಾಟ್ ಕೊಹ್ಲಿಯನ್ನು ಬಚಾವ್ ಮಾಡಿದ್ದು ಕೂಡ ಆರ್ ಸಿಬಿ ಮ್ಯಾನೇಜ್‍ಮೆಂಟ್ ಎಂಬುದನ್ನು ಮರೆಯುವ ಹಾಗಿಲ್ಲ. ಅಡ್ಡದಾರಿ ಹಿಡಿದಿದ್ದ ವಿರಾಟ್ ಕೊಹ್ಲಿಯನ್ನು ವಿಶ್ವದ ಅದ್ಭುತ ಕ್ರಿಕೆಟಿನಾಗಿ ರೂಪಿಸಿದ್ದು ಕೂಡ ಆರ್ ಸಿಬಿಯ ಅಂದಿನ ಟೀಮ್ ಮ್ಯನೇಜ್‍ಮೆಂಟ್.
ಹಾಗಂತ ಆರ್‍ಸಿಬಿ ಕೇವಲ ವಿರಾಟ್‍ಗೆ ಮಾತ್ರ ಬದುಕು ಕಟ್ಟಿಕೊಟ್ಟಿಲ್ಲ. ಹತ್ತಾರು ಕ್ರಿಕೆಟಿಗರ ಪ್ರತಿಭೆಯನ್ನು ಪರಿಚಯಿಸಿದ್ದ ಹೆಗ್ಗಳಿಕೆ ಆರ್ ಸಿಬಿಗೆ ಸಲ್ಲುತ್ತದೆ. ಐಪಿಎಲ್ ಹರಾಜಿನಲ್ಲಿ ಬೇಡವಾಗಿದ್ದ ಕ್ರಿಸ್ ಗೇಲ್‍ಗೆ ಯುನಿವರ್ಸಲ್ ಬಾಸ್ ಎಂಬ ಪಟ್ಟವನ್ನು ಕೊಟ್ಟಿದ್ದು ಕೂಡ ಆರ್ ಸಿಬಿ. ಎಲ್ಲೋ ದೂರದ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಬೆಂಗಳೂರಿನಲ್ಲಿ ಮನೆ ಮಾಡುವಂತೆ ಮಾಡಿದ್ದು ಕೂಡ ಆರ್ ಸಿಬಿ. ಕಳೆದ 18 ವರ್ಷಗಳಿಂದ ಕೊಹ್ಲಿಯನ್ನು ಮನೆ ಮಗನಂತೆ ನೋಡಿಕೊಂಡಿದ್ದು ಕೂಡ ಆರ್ ಸಿಬಿ. ದುಡ್ಡಿಗಿಂತ ಅಭಿಮಾನಿಗಳ ಪ್ರೀತಿಯೇ ಮುಖ್ಯ ಎಂದು ನಂಬಿದವನು, ಒಂದು ಬಾರಿಯಾದ್ರೂ ಐಪಿಎಲ್ ಟ್ರೋಫಿಗೆ ಮುತ್ತಿಡಬೇಕು.
ನಿಜ, ಆರಂಭದಲ್ಲಿ ಆರ್ ಸಿಬಿಗೆ ಟೆಸ್ಟ್ ತಂಡ ಎಂಬ ಹಣೆಪಟ್ಟಿಯನ್ನು ಕಟ್ಟಲಾಯ್ತು. ಟೀಮ್ ಬಗ್ಗೆ ಹಾಗೇ ಹೀಗೆ ಎಂದು ಹೀಯಾಳಿಸಿದವರ ಎದುರು ಅದ್ಭುತ ಪ್ರದರ್ಶನವನ್ನೇ ನೀಡಿತ್ತು. ಸಾಲು ಸಾಲು ಸೋಲುಗಳ ನಡುವೆಯೂ ಮತ್ತೆ ಮತ್ತೆ ಮೇಲೆದ್ದು ಬರುತ್ತಿದ್ದ ಆರ್ ಸಿಬಿಗೆ ಅದೃಷ್ಟ ಕೈಕೊಡುತ್ತಿತ್ತು. 2009, 2011 ಮತ್ತು 2016ರಲ್ಲಿ ಫೈನಲ್ ಪ್ರವೇಶಿಸಿದ್ರೂ ಕಪ್ ಗೆಲ್ಲಲು ಸಾಧ್ಯವಾಗಲಿಲ್ಲ. ಆದ್ರೆ ಒಂದು ನೆನಪಿಟ್ಟುಕೊಟ್ಟುಕೊಳ್ಳಿ… ಐಪಿಎಲ್ ನಲ್ಲಿ ಹಲವು ಐತಿಹಾಸಿಕ ದಾಖಲೆಗಳು, ಹಲವು ಬೇಡವಾದ ದಾಖಲೆಗಳು ಕೂಡ ಆರ್‍ಸಿಬಿ ಹೆಸರಿಗೆ ಅಂಟಿಕೊಂಡಿವೆ. ಆದ್ರೂ ಅಭಿಮಾನಿಗಳ ಅಭಿಮಾನ ಮಾತ್ರ ಒಂಚೂರು ಕಮ್ಮಿಯಾಗಿಲ್ಲ. ವರ್ಷದಿಂದ ವರ್ಷಕ್ಕೆ ಅಭಿಮಾನಿಗಳ ಸಂಖ್ಯೆ ಜಾಸ್ತಿನೇ ಆಗುತ್ತಿದೆ ಎಂಬುದು ಅಷ್ಟೇ ಸತ್ಯ.

ಆರ್ ಸಿಬಿಗೆ ಬೂಸ್ಟ್ ನೀಡಿದ ಡಿಕೆ ಸಾಹೇಬ..!
ಅಂದ ಹಾಗೇ ಈ ಬಾರಿಯ ಐಪಿಎಲ್ ನಲ್ಲಿ ಯಾರೂ ಊಹಿಸದ ರೀತಿಯಲ್ಲಿ ಆರ್‍ಸಿಬಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಈ ಹಿಂದೆ ಆರ್‍ಸಿಬಿ ತಂಡ ಬ್ಯಾಲೆನ್ಸ್ ಆಗಿರಲಿಲ್ಲ. ಬ್ಯಾಲೆನ್ಸ್ ಆಗಿದ್ರೂ ಸ್ಥಿರ ಪ್ರದರ್ಶನ ನೀಡುತ್ತಿರಲಿಲ್ಲ. ಆದ್ರೆ ಈ ಬಾರಿ ಆರ್‍ಸಿಬಿ ಮೆಂಟರ್ ದಿನೇಶ್ ಕಾರ್ತಿಕ್ ಮಾಸ್ಟರ್ ಪ್ಲ್ಯಾನ್ ವಕ್ರ್Àಔಟ್ ಆಗೋದು ಗ್ಯಾರಂಟಿ ಅಂತ ಅನ್ಸುತ್ತೆ. ಟಿ-20 ಅಂದ್ರೆ ಕೇವಲ ಬ್ಯಾಟರ್‍ಗಳ ಆಟವಲ್ಲ. ಬೌಲಿಂಗ್ ಕೂಡ ಅಷ್ಟೇ ಮುಖ್ಯ.
ಹೀಗಾಗಿ ಬಲಿಷ್ಠ ಬೌಲಿಂಗ್ ಪಡೆಯನ್ನು ಕಟ್ಟಲು ದಿನೇಶ್ ಕಾರ್ತಿಕ್ ಐಪಿಎಲ್ ಪ್ಲೇಯರ್ಸ್ ಹರಾಜಿಗಿಂತ ಮುನ್ನವೇ ಪ್ಲ್ಯಾನ್ ಮಾಡಿದ್ದರು. ಎಲ್ಲವೂ ಅಂದುಕೊಂಡಂತೆ ಆರ್ ಸಿಬಿಗೆ ಬಲಿಷ್ಠ ಹಾಗೂ ಅನುಭವಿ ಬೌಲರ್‍ಗಳು ಸಿಕ್ಕಿದ್ದಾರೆ. ಹಾಗೇ, ಆಲ್‍ರೌಂಡ್ ಪ್ರದರ್ಶನವನ್ನೂ ನೀಡುತ್ತಿದೆ. ಇನ್ನೊಂದೆಡೆ, ಮ್ಯಾಚ್ ವಿನ್ ಮಾಡೋ ಆಟಗಾರರನ್ನು ಸೃಷ್ಟಿ ಮಾಡಿದೆ. ಹೀಗಾಗಿ ಈ ಬಾರಿ ಆರ್‍ಸಿಬಿ ನಿರಾಸೆ ಮಾಡಲ್ಲ ಎಂಬ ಬಲವಾದ ನಂಬಿಕೆ ಅಭಿಮಾನಿಗಳಲ್ಲಿದೆ. ಅದಕ್ಕಾಗಿಯೇ ನಮ್ಮ – ನಿಮ್ಮ ಮನಸ್ಸಲ್ಲಿ ಏನಿದೆ ಅಂತ ನಿಮಗೂ ಗೊತ್ತು.. ನಮಗೂ ಗೊತ್ತು..ಈ ಬಾರಿ ಕಪ್ ನಮ್ದೆ ಎಂದು ಧೈರ್ಯದಿಂದಲೇ ಹೇಳುತ್ತಿದ್ದಾರೆ.

ನೆನಪಿದೆಯಾ.. ಐದು ಬಾರಿ ಏಕದಿನ ವಿಶ್ವಕಪ್‍ನಲ್ಲಿ ಆಡಿದ್ರೂ ಸಚಿನ್ ತೆಂಡುಲ್ಕರ್‍ಗೆ ಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದ್ರೆ ಆರನೇ ಬಾರಿ ಅಂದ್ರೆ 2011ರಲ್ಲಿ ಧೋನಿ ಹುಡುಗರು ಹಠಕ್ಕೆ ಬಿದ್ದು ಆಡಿ ಕ್ರಿಕೆಟ್ ದೇವರ ಮುಕುಟಕ್ಕೆ ವಿಶ್ವಕಪ್ ಗರಿ ತೊಡಿಸಿದ್ದರು. ಅದೇ ರೀತಿ ಇಲ್ಲೊಬ್ಬ ಚೇಸಿಂಗ್ ಗಾಡ್ ಇದ್ದಾನೆ. ಕಳೆದ 18 ವರ್ಷಗಳಿಂದ 18 ನಂಬರಿನ ಜೆರ್ಸಿ ತೊಟ್ಟುಕೊಂಡು ಐಪಿಎಲ್ ಟ್ರೋಫಿಗಾಗಿ ತಪಸ್ಸು ಮಾಡುತ್ತಿದ್ದಾನೆ. ವಿರಾಟ್ ಕೊಹ್ಲಿಯ ಹೆಸರಿನಲ್ಲಿ ಇಲ್ಲದ ಏಕೈಕ ಐಪಿಎಲ್ ಟ್ರೋಫಿ 18ನೇ ಆವೃತ್ತಿಯಲ್ಲಾದ್ರೂ ಒಲಿದು ಬರುತ್ತಾ…? ಕಾದು ನೋಡೋಣ.. ಆಲ್ ದಿ ಬೆಸ್ಟ್ ಆರ್ ಸಿಬಿ.. 18 ನಮ್ದೆ..!

ಸನತ್ ರೈ

ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram