ಮಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಜೋರಾಗಿದ್ದು, ಪ್ರತಿದಿನ ನಗರದಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಕೊರೊನಾ ವೇಗಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿದೆ. ಇದೀಗ ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯನ್ನೂ ಲಾಕ್ ಡೌನ್ ಮಾಡುವಂತೆ ಮಾಜಿ ಸಚಿವ ಯು.ಟಿ ಖಾದರ್ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಗಳೇ ದಕ್ಷಿಣ ಕನ್ನಡ ಜಿಲ್ಲೆಯ ಪರಿಸ್ಥಿತಿ ದಿನೇ ದಿನೇ ಕೈ ಮೀರುತ್ತಿದೆ. ಬೆಂಗಳೂರಿನಂತೆ ಇಲ್ಲೂ ಲಾಕ್ ಡೌನ್ ಮಾಡಿ ಎಂದು ಒತ್ತಾಯಿಸಿದ್ದಾರೆ.
ಜೊತೆಗೆ ಇನ್ನಷ್ಟು ಆರೋಗ್ಯ ಹಾಗೂ ವೈದ್ಯಕೀಯ ಮೂಲ ಸೌಕರ್ಯ ಸಿದ್ದತೆ ಮಾಡಿ, ಸೂಕ್ತ ಸಮಯ ನೋಡಿ ಪೂರಕ ಯೋಜನೆಯ ಅನುಷ್ಠಾನ ಮಾದರಿ ಸಿದ್ಧಪಡಿದ ಬಳಿಕವಷ್ಟೇ ಲಾಕ್ ಡೌನ್ ಹಂತ ಹಂತವಾಗಿ ತೆರವುಗೊಳಿಸಿ. ಇದು ನನ್ನ ವಿನಯ ಪೂರ್ವಕ ಮನವಿ ಎಂದು ಖಾದರ್ ಬರೆದುಕೊಂಡಿದ್ದಾರೆ.









